Advertisement

ರೇಣುಕಾಚಾರ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆ ಮುಂದೆ ಕುರಿಗಳೊಂದಿಗೆ ಆಕ್ರೋಶ

08:49 PM Dec 24, 2022 | Team Udayavani |

ದಾವಣಗೆರೆ: ಸರ್ಕಾರಿ ಗೋಮಾಳ ಜಮೀನು ಬಿಜೆಪಿ ಕಾರ್ಯಕರ್ತರ ಹೆಸರಿಗೆ ಮಾಡಿಸಿದ್ದಾರೆ ಎಂದು ಗ್ರಾಮಸ್ಥರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ವೇದಿಕೆ ಮುಂದೆ ಕುರಿಗಳೊಂದಿಗೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ನ್ಯಾಮತಿ‌ ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.

Advertisement

ಬಸವನಹಳ್ಳಿ ಗ್ರಾಮದ ಸರ್ವೇ ನಂಬರ್ 25 ಮತ್ತು 29 ರಲ್ಲಿ ಇದ್ದ ಸರ್ಕಾರಿ ಗೋ ಮಾಳ ಜಮೀನನ್ನು ಶಾಸಕ ರೇಣುಕಾಚಾರ್ಯ ಬಿಜೆಪಿ‌ ಪಕ್ಷದವರಿಗೆ ಉಳಿಮೆ ಮಾಡಲು‌ ಕೊಟ್ಟು ಈಗ ಅವರ ಹೆಸರಿಗೆ ಖಾತೆ ಮಾಡಿಸಿದ್ದಾರೆ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಕಾರ್ಯಕ್ರಮ ಸ್ಥಳಕ್ಕೆ ಕುರಿ ನುಗ್ಗಿಸಿ ಹೋರಾಟ ನಡೆಸಿದರು. ಸಮಸ್ಯೆ ಬಗೆಹರಿಸುವ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next