Advertisement

Telangana: 7 ಗಂಟೆಗಳ ಕಾಲ ವಿದ್ಯುತ್‌ ಕಡಿತ; ತಾನೇ ಕಂಬವೇರಿ ಸಮಸ್ಯೆ ಸರಿಪಡಿಸಿದ ವ್ಯಕ್ತಿ.!

02:32 PM Aug 21, 2024 | Team Udayavani |

ತೆಲಂಗಾಣ: ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾದ ಹಿನ್ನೆಲ್ಲೆ ವ್ಯಕ್ತಿಯೊಬ್ಬ ಸಮಸ್ಯೆಯನ್ನು ಸರಿಪಡಿಸಲು ವಿದ್ಯುತ್‌ ಕಂಬಕ್ಕೆ ಹತ್ತಿ ಅಪಾಯಕಾರಿ ಸಾಹಸಕ್ಕೆ ಮುಂದಾದ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.

Advertisement

ಗ್ರಾಮದಲ್ಲಿ ಸತತ 7 ಗಂಟೆಗಳ ಕಾಲ ವಿದ್ಯುತ್‌ ಕಡಿತಗೊಳಿಸಲಾಗಿತ್ತು. ನಿವಾಸಿಗಳು ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ನೀಡಿದ ಬಳಿಕ ಕೆಲ ಗಂಟೆಗಳವರೆಗೂ ಕಾದುಕೂತಿದ್ದಾರೆ. ಆದರೆ ಕರೆಂಟ್‌ ಬರದಿದ್ದಾಗ ಗ್ರಾಮಸ್ಥರು ಪರದಾಡಿದ್ದಾರೆ.

ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಒಬ್ಬ ವ್ಯಕ್ತಿ ಏನೇ ಆಗಲಿ ಇದನ್ನು ತಾವೇ ಸರಿಪಡಿಸಿಕೊಳ್ಳಬೇಕೆಂದು ವಿದ್ಯುತ್‌ ಕಂಬಕ್ಕೇರಿದ್ದಾನೆ. ಅಪಾಯದ ಹೊರತಾಗಿಯೂ ವಿದ್ಯುತ್‌ ಕಂಬಕ್ಕೇರಿ ಅಲ್ಲಿ ಏನೋ ಮಾಡಿದ ಬಳಿಕ ಗ್ರಾಮದಲ್ಲಿ ಕರೆಂಟ್‌ ಬಂದಿದೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಾವೆಲ್ಲ ಪರದಾಡುವ ಸ್ಥಿತಿ ಬಂದಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಹಾಗೂ ಇಲಾಖೆಯವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಈ ಬಗ್ಗೆ ಕೆಲ ರಾಜಕೀಯ ಮುಖಂಡರು ಕೂಡ ಟ್ವೀಟ್‌ ಮಾಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯತನವನ್ನು ಪ್ರಶ್ನೆ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next