Advertisement

ಅನಿತಾ ವರ್ಗಾವಣೆ ದಂಧೆಯಲ್ಲಿ ಭಾಗಿ

06:00 AM Oct 27, 2018 | Team Udayavani |

ರಾಮನಗರ: ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ವಿರುದ್ಧ ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ವರ್ಗಾವಣೆ ದಂಧೆಯ ಆರೋಪ ಹೊರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನಿತಾ ಅವರು ವರ್ಗಾವಣೆ ದಂಧೆಯಲ್ಲಿ ನೂರಾರು ಕೋಟಿ ರೂ.
ಲೂಟಿ ಮಾಡಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಹಣ ಪಡೆಯದೆ ಏನೊಂದು ಕೆಲಸವನ್ನೂ ಮಾಡೋಲ್ಲ ಅಂತ ಸ್ವಯಂ ಜೆಡಿಎಸ್‌ ಮುಖಂಡರು ಮತ್ತು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಮಧ್ಯೆ, ತಾಲೂಕಿನ ಕೈಲಾಂಚ ಹೋಬಳಿಯಲ್ಲಿ ಪ್ರತಿಕ್ರಿಯಿಸಿದ ಅನಿತಾ, ಸಿ.ಪಿ.ಯೋಗೇಶ್ವರ್‌ ಅವರಿಗೆ ತಮ್ಮ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಹತಾಶರಾಗಿ ಅವರು
ಹೀಗೆ ಮಾತನಾಡುತ್ತಿದ್ದಾರೆಂದು ಕಿಡಿ ಕಾರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next