Advertisement

ಉಪಚುನಾವಣೆ ಫಲಿತಾಂಶದ ಬಗ್ಗೆ ಆಶ್ಚರ್ಯವಾಗುತ್ತಿದೆ ಎಂದ ಅನಿತಾ ಕುಮಾರಸ್ವಾಮಿ

10:02 AM Dec 12, 2019 | keerthan |

ರಾಮನಗರ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ತೀವ್ರ ಮುಖಭಂಗ ಅನುಭವಿಸಿದ್ದು, ಶೂನ್ಯ ಸಂಪಾದನೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ, ಫಲಿತಾಂಶ ಕಂಡು ನನಗೆ ಆಶ್ಚರ್ಯವಾಗುತ್ತಿದೆ ಎಂದಿದ್ದಾರೆ.

Advertisement

ಒಂದು ಪಕ್ಷದಿಂದ ಗೆದ್ದು ಇನ್ನೊಂದು ಪಕ್ಷಕ್ಕೆ ಹಾರುವವರನ್ನು ಜನ ಗೆಲ್ಲಿಸ್ತಾರೆ ಅಂದರೆ ಆಶ್ಚರ್ಯವಾಗುತ್ತೆ. ಚುನಾವಣೆ ಬರುತ್ತೆ, ಹೋಗುತ್ತೆ. ಆದರೆ ಜನರು ನಮ್ಮ ಪರವಾಗಿದ್ದಾರೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ರಾಜೀನಾಮೆ ವಿಚಾರದ ಬಗ್ಗೆ ಗಮನಸೆಳೆದಾಗ ನನಗೇನು ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದರು.  ಇದರ ಬಗ್ಗೆ ದೊಡ್ಡವರು ನೋಡಿಕೊಳ್ತಾರೆ ಎಂದಷ್ಟೇ ಹೇಳಿದರು.

ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹೀನಾಯ ಸೋಲನುಭವಿಸಿದೆ. ತನ್ನ ಭದ್ರ ಕೋಟೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಕೂಡಾ ಸೋಲನುಭವಿಸಿದ್ದು, ಅಲ್ಲಿ ಮೊದಲ ಬಾರಿಗೆ ಬಿಜೆಪಿ ಕಾಲಿರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next