Advertisement

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

01:50 PM May 27, 2024 | Team Udayavani |

ಹುಬ್ಬಳ್ಳಿ: ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಸರ್ಕಾರ ಕೂಡಲೇ ನ್ಯಾಯ ಒದಗಿಸಬೇಕು. ಹಂತಕನಿಗೆ ಗಲ್ಲು ಶಿಕ್ಷೆ ನೀಡಬೇಕು. ರಾಜ್ಯದಲ್ಲೂ ಉತ್ತರ ಪ್ರದೇಶ ಮಾದರಿ ಕಾನೂನು ಜಾರಿಗೊಳಿಸಬೇಕು ಎಂದು ಅಂಬಿಗರ ಚೌಡಯ್ಯ ನಿಗಮದ ಮಾಜಿ ಅಧ್ಯಕ್ಷ ಹಾಗೂ ಬೀದರ ಜಿಲ್ಲಾ ಟೋಕರೆ ಕೋಲಿ ಸಮಾಜ ಸಂಘದ ಜಿಲ್ಲಾಧ್ಯಕ್ಷ ಜಗನ್ನಾಥ ಜಾಮದಾರ ಆಗ್ರಹಿಸಿದರು.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸಮಾಜದ ಯುವತಿ ಅಂಜಲಿ ಹತ್ಯೆಯಾಗಿ 15 ದಿನಗಳು ಕಳೆದರೂ ಇದುವರೆಗೆ ಮುಖ್ಯಮಂತ್ರಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ ಮತ್ತು ಮನೆಗೆ ಭೇಟಿಕೊಟ್ಟಿಲ್ಲ. ಇನ್ನು 10-15 ದಿನಗಳಲ್ಲಿ ಅವರು ಅಂಜಲಿ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳದಿದ್ದರೆ ಸಮಾಜದಿಂದ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಗೂಂಡಾಗಳ ಮಟ್ಟ ಹಾಕಬೇಕಿದೆ. ಆ ನಿಟ್ಟಿನಲ್ಲಿ ಯುಪಿ ಮಾದರಿ ಕಾನೂನು ಜಾರಿಗೆ ತರಬೇಕು. ಅಂಜಲಿ ಕುಟುಂಬಕ್ಕೆ 1ಕೋಟಿ ರೂ. ಪರಿಹಾರ ಘೋಷಿಸಬೇಕು. ಸರ್ಕಾರಿ ನೌಕರಿ ಕೊಡಬೇಕು. ಮನೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Advertisement

Udayavani is now on Telegram. Click here to join our channel and stay updated with the latest news.

Next