Advertisement

ಸಾಗರ: ದನಗಳಿಗೆ ನೀರು ಕುಡಿಸಲು ಹೋಗಿದ್ದ ಯುವತಿ ಬಾವಿಗೆ ಬಿದ್ದು ಸಾವು!

03:57 PM Jan 21, 2021 | keerthan |

ಶಿವಮೊಗ್ಗ: ದನಗಳಿಗೆ ನೀರು ಕುಡಿಸಲು ತೆರಳಿದ್ದ ಯುವತಿಯೋರ್ವಳು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಗುರುವಾರ ನಡೆದಿದೆ.

Advertisement

ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಅಂಜಲಿ (19) ಮೃತಪಟ್ಟ ಯುವತಿ.

ಅಂಜಲಿ ಸಾಗರದ ಉಳ್ಳೂರಿನಲ್ಲಿ ಬಿಎಸ್ಸಿ ನರ್ಸಿಂಗ್ ಓದುತ್ತಿದ್ದರು. ಇಂದು ಮನೆಯಲ್ಲಿದ್ದ ಸಮಯದಲ್ಲಿ ದನಗಳಿಗೆ ನೀರು ಕುಡಿಸಲು ಬಾವಿಗೆ ನೀರು ತರಲು ಹೋಗಿದ್ದರು. ಈ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ

ನೀರಿಗೆ ಹೋಗಿದ್ದ ಅಂಜಲಿ ಬಾರದಿದ್ದನ್ನು ಗಮನಿಸಿದ ಮನೆಯವರು ಬಾವಿಯ ಬಳಿ ಹೋದಾಗ ಪ್ರಕರಣ ಬೆಳಕಿಗೆ‌ ಬಂದಿದೆ.

Advertisement

ಇದನ್ನೂ ಓದಿ: ಸ್ನೇಹಿತರಿಂದಲೇ ಯುವತಿಗೆ ಬ್ಲ್ಯಾಕ್‌ಮೇಲ್‌: ಮಾಂಗಲ್ಯ ಸರ ನೀಡಿದರೂ ಬಿಡದ ದುರುಳರು

ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next