Advertisement

ಅಂಜನಿಪುತ್ರ ಚಿತ್ರಕ್ಕೆ ನ್ಯಾಯಾಂಗ ನಿಂದನೆ ಕಂಟಕ

01:25 PM Dec 27, 2017 | Team Udayavani |

ಬೆಂಗಳೂರು: ಅಂಜನಿಪುತ್ರ ಸಿನಿಮಾ ಪ್ರದರ್ಶನ ನಿರ್ಬಂಧಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ಉಲ್ಲಂ ಸಲಾಗಿದೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ದೂರು ದಾಖಲಿಸಲಾಗಿದೆ.

Advertisement

ಸಿನಿಮಾ ಪ್ರದರ್ಶನಕ್ಕೆ ಸಿಟಿ ಸಿವಿಲ್‌ ಕೋರ್ಟ್‌ ನಿರ್ಬಂಧ ವಿಧಿಸಿದ್ದರೂ ಪ್ರದರ್ಶನ ಮುಂದುವರಿಸಲಾಗಿದೆ ಎಂದು ನ್ಯಾಯಾಂಗ ನಿಂದನೆ ದೂರು ಸಲ್ಲಿಕೆಯಾಗಿದ್ದು, ಅಂಜನಿಪುತ್ರ ಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ವಕೀಲರಾದ ನಾರಾಯಣಸ್ವಾಮಿ, ವಿನೋದ್‌ಕುಮಾರ್‌, ವಿಜಯ್‌ಕುಮಾರ್‌ ಈ ದೂರು ನೀಡಿದ್ದು ಬುಧವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ವಕೀಲ ಸಮುದಾಯಕ್ಕೆ ಅವಮಾನವಾಗುವಂತಹ ಸಂಭಾಷಣೆಯನ್ನು ಚಿತ್ರದಲ್ಲಿ ಬಳಸಲಾಗಿದೆ. ಈ ಸಂಬಂಧ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ,

ಜ. 3ರವರೆಗೆ ಚಿತ್ರಪ್ರದರ್ಶನ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ಸಂಬಂಧ ನೋಟಿಸ್‌ ಕೂಡ ಜಾರಿಯಾಗಿದೆ. ಆದರೆ, ಆಕ್ಷೇಪಿತ ಸಂಭಾಷಣೆಯ ದೃಶ್ಯಾವಳಿಯನ್ನು ತೆಗೆದುಹಾಕದೇ ನ್ಯಾಯಾಲಯದ ಆದೇಶ ಉಲ್ಲಂ ಸಿ ಚಿತ್ರಪ್ರದರ್ಶನ ಮಾಡಲಾಗುತ್ತಿದೆ ಎಂದು ವಕೀಲ ನಾರಾಯಣಸ್ವಾಮಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next