Advertisement

ಮೀನು ಹಿಡಿಯಲು ಹೋಗಿ ಕಡಲ ಪಾಲದ ನೌಕಾನೆಲೆ ಉದ್ಯೋಗಿ

03:24 PM Sep 26, 2021 | Team Udayavani |

ಅಂಕೋಲಾ:ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರದಲ್ಲಿ ಮುಳುಗಿ ನೌಕಾನೆಲೆ ಉದ್ಯೋಗಿಯೋರ್ವ ಮೃತ ಪಟ್ಟ ಘಟನೆ ಭಾನುವಾರ ಬೆಲೇಕೆರಿಯಲ್ಲಿ ನಡೆದಿದೆ.

Advertisement

ನೌಕಾನೆಲೆ ಉದ್ಯೋಗಿಯಾಗಿರುವ ತಾಲೂಕಿನ ಬಾವಿಕೇರಿ ಗ್ರಾಮದ ನಿವಾಸಿ ಪುರಂದರ ಶಿವಾನಂದ ನಾಯ್ಕ ಎಂಬಾತನೇ ಮೃತಪಟ್ಟ ವ್ಯಕ್ತಿ.

ಈತನು ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಬೆಲೇಕೆರಿ ತೀರದಲ್ಲಿ ಮೀನುಗಾರಿಕೆ ನಡೆಸಲು ಹೋಗಿದ್ದನು. ಸಮುದ್ರದಲ್ಲಿ ಆಕಸ್ಮಿಕವಾಗಿ ಬಿದ್ದು ಕೆಲ ಕಾಲ ಕಣ್ಮರೆಯಾದ ಇತನನ್ನು ಅಂಕೋಲಾ ಪೊಲೀಸರು ಮತ್ತು ಕರಾವಳಿ ಕಾವಲು ಪಡೆ ತಂಡ, ಸ್ಥಳೀಯರು ಹುಡುಕಾಟ ನಡೆಸಿದ ಬಳಿಕ ಮೃತ ದೇಹ ಪತ್ತೆ ಹಚ್ಚಿದ್ದಾರೆ.

ಇದನ್ನೂ ಓದಿ:ಬೆಳಗಾವಿ ಮಾದರಿ ಯಶಸ್ವಿಯಾದರೆ ಪ್ರತಿ ಪಾಲಿಕೆಯಲ್ಲೂ ಇ-ಗ್ರಂಥಾಲಯ ನಿರ್ಮಾಣ: ಸಿಎಂ

ಕರಾವಳಿ ಕಾವಲು ಪಡೆಯ ಬೋಟ್ ಕ್ಯಾಪ್ಟನ್ ಆನಂದ ಗಾಂವಕರ್, ಎಎಸ್ಐ  ರವಿಂದ್ರ ನಾಯ್ಕ. ಸಿಬ್ಬಂದಿ ರತ್ನಾಕರ ನಾಯ್ಕ ಹುಡುಕಾಟ ನಡೆಸಿದ್ದಾರೆ. ಅಂಕೋಲಾ ಪಿಎಸ್ಐ ಪ್ರವೀಣ ಕುಮಾರ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next