Advertisement

ಕೊಲೆಗೆ ಯತ್ನಿಸಿದವನ ಕೈಯಿಂದ ತಪ್ಪಿಸಿಕೊಂಡು ನಿರ್ಜನ ಪ್ರದೇಶದಲ್ಲಿ ರಾತ್ರಿ ಕಳೆದ ವ್ಯಕ್ತಿ

07:08 PM Mar 12, 2024 | Team Udayavani |

ಅಂಕೋಲಾ : ಕುತ್ತಿಗೆಗೆ ಚಾಕು ಹಾಕಿ ಕೊಲೆಗೆ ಯತ್ನಿಸಿದ ವ್ಯಕ್ತಿಯಿಂದ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರದ ಘಟನೆ ತಾಲೂಕಿನ ಮಂಜಗುಣಿಯ ತಾರಿಯ ಬಳಿ ಭಾನುವಾರ ರಾತ್ರಿ ನಡೆದಿದೆ.

Advertisement

ಬೆಳಂಬಾರದ ಮುಡ್ರಾಣಿಯ ಗಂಗಾಧರ ಸುಕ್ರು ಗೌಡ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದಾನೆ.

ಬೆಳಂಬಾರ ತಾಳೇಬೈಲನ ಗಂಗಾಧರ ಗೌಡ ಅವರು ಭಾನುವಾರ ರಾತ್ರಿ ತನ್ನ ಮನೆಗೆ ಹೋಗಲು ಕುಂಬಾರಕೇರಿಯ ಬಳಿ ನಿಂತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ, ಗಂಗಾಧರ ಗೌಡನನ್ನು ಬೆಳಂಬಾರಕ್ಕೆ ಬಿಡುತ್ತೇನೆ ಎಂದು ತನ್ನ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಸಾಗಿದ್ದಾನೆ.

ಬೈಕ್‌ನಲ್ಲಿ ಸಾಗುತ್ತಿರುವಾಗ ಬೈಕ್ ಸವಾರನು ತನಗೆ ಮಂಜಗುಣಿಯಲ್ಲಿ ಬಳಿ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಮಂಜುಗುಣಿಯ ತಾರಿಯ ಬಳಿಯ ನಿರ್ಜನ ಪ್ರದೇಶಕ್ಕೆ ಗಂಗಾಧರ ಗೌಡನನ್ನು ಕರೆದುಕೊಂಡು ಹೋಗಿ ಹಿಂಬದಿಯಿಂದ ಬಂದು ಕುತ್ತಿಗೆಯನ್ನು ಹಿಡಿದುಕೊಂಡು ನಿರ್ದಾಕ್ಷಿಣ್ಯವಾಗಿ ಕುತ್ತಿಗೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.

ಈ ವೇಳೆ ಆತನ ಕೈಯಿಂದ ತಪ್ಪಿಸಿಕೊಂಡು ಎದ್ದೊ ಬಿದ್ದು ಓಡಿ ಬಂದ ಗಂಗಾಧರ ಗೌಡ, ರಸ್ತೆಯ ಬದಿಯ ಚರಂಡಿಯೊಳಗೆ ಅವಿತುಕೊಂಡು ರಾತ್ರಿ ಕಳೆದಿದ್ದಾನೆ. ಬೆಳಿಗ್ಗೆ ಅಂಕೋಲಾ ಸರಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಈ ಬಗ್ಗೆ ಗಂಗಾಧರ ಗೌಡ ಪೊಲೀಸ್ ದೂರನ್ನು ನೀಡಿದ್ದು ಈ ಬಗ್ಗೆ ಸೂಕ್ತ ಕೈಗೊಂಡು ರಕ್ಷಣೆ ಒದಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

Advertisement

ಈ ವ್ಯಕ್ತಿಯನ್ನು ಪರಿಚಯಿಸುವುದಾಗಿ ಗಂಗಾಧರ ಗೌಡ ದೂರಿನಲ್ಲಿ ವಿವರಿಸಿದ್ದು, ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಘಟನೆಯಿಂದಾಗಿ ಈ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: Lok Sabha Election: 43 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್…

Advertisement

Udayavani is now on Telegram. Click here to join our channel and stay updated with the latest news.

Next