Advertisement

ಅಂಕುರ್‌ ಶಿಕ್ಷಣ ಸಂಸ್ಥೆಯ 6ನೇ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈವಿಧ್ಯ

01:31 PM Mar 23, 2017 | Team Udayavani |

ಮುಂಬಯಿ: ಮೊಗವೀರ ವ್ಯವಸ್ಥಾಪಕ ಮಂಡಳಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಅಂಕುರ್‌ ಸಂಸ್ಥೆಯ 6ನೇ ವಾರ್ಷಿಕೋತ್ಸವ ಸಂಭ್ರಮವು ಮಾ. 19ರಂದು ಅಪರಾಹ್ನ ಡೊಂಬಿವಲಿ ಪೂರ್ವದ ಠಾಕೂರ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

Advertisement

ಪ್ರಾರಂಭದಲ್ಲಿ ಅಂಕುರ್‌ ಸಂಸ್ಥೆಯ ಶಿಕ್ಷಕಿಯರಿಂದ ಪ್ರಾರ್ಥನೆ ನಡೆಯಿತು. ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಂಕುರ್‌ನ ಮುಖ್ಯ ಶಿಕ್ಷಕಿ ಪೂನಂ ಮೂಲೆ ಅವರು ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ಮಕ್ಕಳಿಂದ ವೈವಿಧ್ಯಮಯ ನೃತ್ಯಗಳು ಪ್ರದರ್ಶನಗೊಂಡವು. ಮರಾಠಿ ಮಣ್ಣಿನಲ್ಲಿ ಹುಟ್ಟಿದ ವಿವಿಧ ಧರ್ಮದ ಮಕ್ಕಳು ತುಳು-ಕನ್ನಡ ಭಾಷೆಯ ಹಾಡುಗಳಿಗೆ ಹೆಜ್ಜೆ ಹಾಕಿ ಎಲ್ಲರ ಮನಸನ್ನು ಗೆದ್ದರು. ಮಕ್ಕಳು ಪಾಲಕ-ಪೋಷಕರಿಂದಲೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಇದರ ಕಾರ್ಯಾಧ್ಯಕ್ಷ ನಾರಾಯಣ ಚಂದನ್‌ ಅವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಅಂಕುರ್‌ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಭಾಸ್ಕರ್‌ ಕಾಂಚನ್‌, ಕಾರ್ಯದರ್ಶಿ ಉಮೇಶ್‌ ಕೆ. ಮೆಂಡನ್‌, ಸದಸ್ಯರಾದ ಕೆ. ಕೆ. ಸುವರ್ಣ, ಕಾರ್ಯಾಧ್ಯಕ್ಷ ಯದುವೀರ್‌ ಪುತ್ರನ್‌, ಉಪ ಕಾರ್ಯಾಧ್ಯಕ್ಷ ಸುರೇಶ್‌ ಕರ್ಕೇರ, ಉಪ ಕಾರ್ಯದರ್ಶಿ ಚಂದ್ರಶೇಖರ ಬಂಗೇರ, ಕೋಶಾಧಿಕಾರಿ ಹರಿಶ್ಚಂದ್ರ ಮೆಂಡನ್‌ ಅವರು ಉಪಸ್ಥಿತರಿದ್ದರು.

ಶೈಕ್ಷಣಿಕ ವರ್ಷದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳನ್ನು ಅತಿಥಿ-ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಸಂಸ್ಥೆಯ ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಂಬಂದಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬಂದಿಗಳನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಭಾಸ್ಕರ್‌ ಕಾಂಚನ್‌ ಅವರು ಪುಷ್ಪಗುತ್ಛವನ್ನಿತ್ತು ಗೌರವಿಸಿ ಕೃತಜ್ಞತೆ ಸಲ್ಲಿಸಿದರು.

ಮಕ್ಕಳ ಪಾಲಕರು ಮತ್ತು ಪೋಷಕರನ್ನು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆಯ ಕಾರ್ಯಾಧ್ಯಕ್ಷ ಯದುವೀರ ಪುತ್ರನ್‌ ಅವರು ಪುಷ್ಪಗುತ್ಛವನ್ನಿತ್ತು ಗೌರವಿಸಿದರು. ಮುಖ್ಯ ಶಿಕ್ಷಕಿ ಪೂನಂ ಮೂಲೆ ಕಾರ್ಯಕ್ರಮ ನಿರ್ವಹಿಸಿದರು. ದಿಲೇಶ್‌ ಪೆಡನ್ಕರ್‌ ವಂದಿಸಿದರು. ಕೊನೆಯಲ್ಲಿ ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next