Advertisement

ತ.ನಾ.ನಿಂದ ರಾಜ್ಯಕ್ಕೆ ಅಕ್ಕಿ: ಚಾಲಕ ವಶಕ್ಕೆ

01:15 PM Oct 03, 2018 | |

ಮಳವಳ್ಳಿ: ದಾಖಲೆ ಇಲ್ಲದೆ ಲಾರಿಯಲ್ಲಿ ಸಾಗಿಸುತ್ತಿದ್ದ ಅಕ್ಕಿಯನ್ನು ತಾಲೂಕಿನ ಮಾರೇಹಳ್ಳಿ ಗ್ರಾಮದ ದೇವಸ್ಥಾನದ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿನಿಂದ ಕೊಳ್ಳೇಗಾಲ ಮಾರ್ಗವಾಗಿ ಲಾರಿ ಆಗಮಿಸಿದ್ದು, ತಮಿಳುನಾಡಿಗೆ ಸೇರಿದ್ದು ಎನ್ನಲಾದ ಅನ್ನಭಾಗ್ಯದ ಅಕ್ಕಿಮೂಟೆಗಳನ್ನು ಲಾರಿಯಲ್ಲಿ ತುಂಬಿದ್ದಾರೆ ಎಂದು ಹೇಳಲಾಗುತ್ತಿದೆ.
ಮಧ್ಯವರ್ತಿಗಳ ಮೂಲಕ ಅಕ್ರಮವಾಗಿ ಅಕ್ಕಿಯನ್ನು ತಂದು ಅದಕ್ಕೆ ಪಾಲಿಶ್‌ ಮಾಡಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಹುನ್ನಾರ ಇದರ ಹಿಂದಿದೆ ಎಂದು ಶಂಕಿಸಲಾಗಿದೆ. ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Advertisement
Advertisement

Udayavani is now on Telegram. Click here to join our channel and stay updated with the latest news.

Next