Advertisement

ಅ.2ರಿಂದ ಹಜಾರೆ ನಿರಶನ

09:20 AM Jul 30, 2018 | Team Udayavani |

ರಾಳೇಗಣ ಸಿದ್ಧಿ: ಕೇಂದ್ರದಲ್ಲಿ ಲೋಕಪಾಲರ ನೇಮಕಕ್ಕೆ ವಿಳಂಬ ಮಾಡುತ್ತಿರುವ ಕೇಂದ್ರ ಸರಕಾರದ ಕ್ರಮ ಖಂಡಿಸಿ ಅಕ್ಟೋಬರ್‌ 2ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಗಾಂಧಿವಾದಿ, ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಘೋಷಿಸಿದ್ದಾರೆ. ಲೋಕಪಾಲ ನೇಮಕ ಮಾಡುತ್ತೇವೆ ಮತ್ತು ಲೋಕಪಾಲ ವಿಧೇಯಕವನ್ನು ಅನುಷ್ಠಾನ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಸರಕಾರ ಈಗ ಯಾವುದನ್ನೂ ಮಾಡುತ್ತಿಲ್ಲ. ಹೀಗಾಗಿ, ಅ.2ರಂದು ನಾನು ನನ್ನ ಊರಾದ ಮಹಾರಾಷ್ಟ್ರದ ರಾಳೇಗಣ ಸಿದ್ಧಿಯಲ್ಲಿ ಸತ್ಯಾಗ್ರಹ ಆರಂಭಿಸುತ್ತೇನೆ ಎಂದು ಅಣ್ಣಾ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next