Advertisement

ದೊಡ್ಮನೆಯಿಂದ ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ : ವೆಜ್, ನಾನ್ ವೆಜ್ ಆಹಾರ ಸಿದ್ಧತೆ

07:55 AM Nov 09, 2021 | Team Udayavani |

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ರಾಜ್ ಕುಟುಂಬದಿಂದ ಗಣ್ಯರಿಗೆ ಮತ್ತು ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡಲಾಗಿದೆ.

Advertisement

ಇಂದು 12 ಘಂಟೆಯಿಂದ ಅರಮನೆ ಮೈದಾನದ ವೈಟ್ ಪೆಟಲ್ಸ್ ಹಾಗು ತ್ರಿಪುರವಾಸಿನಿಯಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಅಪ್ಪು ಆಹಾರ ಪ್ರಿಯರಾಗಿದ್ದರಿಂದ ಅವರ ಅಭಿಮಾನಿಗಳಿಗೆ ವಿವಿಧ ರೀತಿಯ ಭಕ್ಷಗಳನ್ನು ಸಿದ್ಧ ಮಾಡಲಾಗುತ್ತಿದೆ.

ಗೀ ರೈಸ್, ಅನ್ನ ಸಾರು,‌ ಅಕ್ಕಿ ಪಾಯಸ, ಮಸಾಲೆ ವಡೆ, ಸೇರಿದಂತೆ ವಿವಿಧ ರೀತಿಯ ಮಾಂಸಾಹಾರವನ್ನುತಯಾರು ಮಾಡಲಾಗುತ್ತಿದೆ. ಇನ್ನು ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ 50 ಸಾವಿರ ಜನ ಸೇರುವ ಸಾಧ್ಯತೆ ಇದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ನೇಮಿಸಲಾಗಿದೆ.

ರಾಜ್ ಕುಟುಂಬದ ಸೂಚನೆಯಂತೆ ಅಭಿಮಾನಿಗಳಿಗೆ ಅಚ್ಚುಕಟ್ಟಾಗಿ, ದೇಸಿ ಶೈಲಿಯಲ್ಲಿ ಸೌದೆ ಒಲೆಯಲ್ಲಿಯೇ ಅಡುಗೆಯನ್ನು ಮಾಡಲಾಗಿದ್ದು, ಬಾಳೆ ಎಲೆಯಲ್ಲಿಯೇ ಊಟ ಬಡಿಸಲಾಗುತ್ತದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next