Advertisement

ಸಿಎಂ ತೀರ್ಮಾನದಂತೆ ಅನ್ನಭಾಗ್ಯ ಅಕ್ಕಿ ಪ್ರಮಾಣ

06:00 AM Aug 09, 2018 | Team Udayavani |

ಬೆಂಗಳೂರು: “ಅನ್ನಭಾಗ್ಯ ಯೋಜನೆಯಡಿ ಸದ್ಯ ಏಳು ಕೆ.ಜಿ. ಅಕ್ಕಿ ಕೊಡುತ್ತಿದ್ದೇವೆ. ಮುಂದೆ ಮುಖ್ಯಮಂತ್ರಿಯವರು ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದರಂತೆ ವ್ಯವಸ್ಥೆ ಮುಂದುವರಿಯಲಿದೆ’ ಎಂದು ಆಹಾರ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, “ಅಕ್ಕಿ ಕಡಿತ ಮಾಡಿ ಎಂದು ಮುಖ್ಯಮಂತ್ರಿ ಈವರೆಗೆ ಸೂಚನೆ ಕೊಟ್ಟಿಲ್ಲ. ಏಳು ಕೆ.ಜಿ. ಅಕ್ಕಿ ನೀಡುವಂತೆ ಹೇಳಿದ್ದಕ್ಕೆ ಅದೇ ರೀತಿ ಕೊಡಲಾಗುತ್ತಿದೆ. ಅವರು ಏಳು ಕೆ.ಜಿ. ಕೊಡಿ ಅಂತಾರೋ ಅಥವಾ 5 ಕೆ.ಜಿ. ಕೊಡಿ ಅಂತಾರೋ ಅದನ್ನು ನಾವು ಪಾಲಿಸಬೇಕು. ಸಿಎಂ ಡೈರೆಕ್ಷನ್‌ ಓವರ್‌ಟೇಕ್‌ ಮಾಡಲಿಕ್ಕೆ’ ಆಗುತ್ತಾ ಎಂದು ಪ್ರಶ್ನಿಸಿದರು. ಅನಿಲಭಾಗ್ಯ ಯೋಜನೆಯ ಫ‌ಲಾನುಭವಿಗಳಿಗೆ ನೀಡಲು ಖರೀದಿಸಿರುವ ಸ್ಟೌಗಳನ್ನು ಟೆಂಡರ್‌ ಕರೆದು, ನಿಯಮಗಳ ಪ್ರಕಾರ ಖರೀದಿ ಮಾಡಲಾಗಿದೆ. ಸರ್ಕಾರಿ ಆದೇಶ ಹೊರಡಿಸಿಯೇ ಖರೀದಿ ಪ್ರಕ್ರಿಯೆ ನಡೆಸಲಾಗಿದೆ. ಗುಣಮಟ್ಟದ ಬಗ್ಗೆ ಎಂಎಸ್‌ಐಎಲ್‌ಗೆ ಪತ್ರ ಬರೆದು ವಿವರಣೆ ಕೇಳಿದ್ದೇನೆ. ಅಷ್ಟಕ್ಕೂ ಕೇಂದ್ರ ಸರ್ಕಾರದ ಉಜ್ವಲ ಯೋಜನೆಗೂ ಇದೇ ಸ್ಟೌಗಳನ್ನು ಖರೀದಿ ಮಾಡಲಾಗಿದೆ ಎಂದು ಇದೇ ವೇಳೆ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next