Advertisement

ಬಿಜೆಪಿ ತ್ಯಜಿಸಲು ಅಣ್ಣಾಮಲೈ ಕಾರಣ! ನಟಿ ಗಾಯತ್ರಿ ರಘುರಾಮ್‌

07:34 PM Jan 03, 2023 | Team Udayavani |

ಚೆನ್ನೈ: ತಮಿಳುನಾಡಿನ ನಟಿ ಗಾಯತ್ರಿ ರಘುರಾಮ್‌ ಅವರು ಬಿಜೆಪಿಗೆ ವಿದಾಯ ಹೇಳಿದ್ದಾರೆ. ಜತೆಗೆ ಪಕ್ಷದ ತಮಿಳುನಾಡು ಘಟಕದಲ್ಲಿ ಮಹಿಳೆಯರಿಗೆ ಗೌರವಯುತ ಸ್ಥಾನವೂ ಇಲ್ಲ, ಸುರಕ್ಷತೆಯೂ ಇಲ್ಲ ಎಂದು ಆರೋಪ ಮಾಡಿದ್ದಾರೆ. ತಾವು ಪಕ್ಷ ತೊರೆಯಲು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರೇ ಕಾರಣ ಎಂದು ಟೀಕಿಸಿದ್ದಾರೆ.

Advertisement

ಆದರೆ, ಹೆಸರು ಬಹಿರಂಗಪಡಿಸಲಿಚ್ಛಿಸದ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿ, ಅವರು ಪ್ರಮುಖ ನಾಯಕರೇ ಅಲ್ಲ. ಗಾಯತ್ರಿ ಅವರ ಮಾತುಗಳಿಗೆ ಹೆಚ್ಚಿನ ಪ್ರಾಶಸ್ತ್ಯವಿಲ್ಲ ಎಂದು ಹೇಳಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಗಾಯತ್ರಿ ರಘುರಾಮ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಲಾಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next