Advertisement

ಇಂತಹ ಹಲವು ಸೋಲನ್ನು ನೋಡಿದ್ದೇನೆ: ಚುನಾವಣಾ ಸೋಲಿನ ಬಳಿಕ ಅಣ್ಣಾಮಲೈ ಪ್ರತಿಕ್ರಿಯೆ

11:37 AM May 03, 2021 | Team Udayavani |

ಚೆನ್ನೈ: ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಕೆ.ಅಣ್ಣಾಮಲೈ ಅವರು ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅದರೆ ರಾಜಕೀಯ ಜೀವನದ ಚೊಚ್ಚಲ ಚುನಾವಣೆಯಲ್ಲಿಯೇ ಅಣ್ಣಾಮಲೈ ಸೋಲನುಭವಿಸಿದ್ದಾರೆ. ಫಲಿತಾಂಶದ ಬಳಿಕ ಅಣ್ಣಾಮಲೈ ಟ್ವೀಟ್ ಮಾಡಿದ್ದು, ಸೋಲು ಜೀವನದ ಒಂದು ಭಾಗ. ಹಿಂದೆಯೂ ಇಂತಹ ಹಲವು ಸೋಲುಗಳನ್ನು ಕಂಡಿದ್ದೇನೆ ಎಂದಿದ್ದಾರೆ.

Advertisement

ಸೋಲುಗಳು ಜೀವನದ ಒಂದು ಭಾಗವಾಗಿದ್ದು, ಇಂತಹ ಹಲವು ಸೋಲುಗಳನ್ನು ನೋಡಿದ್ದೇನೆ. ಗೆಲುವಿನ ನಿರೀಕ್ಷೆ ಇತ್ತು. ಆದರೆ, ಅದು ಸಾಧ್ಯವಾಗಿಲ್ಲ’ ಎಂದು ಅಣ್ಣಾಮಲೈ ಹೇಳಿದ್ದಾರೆ.

ಇದನ್ನೂ ಓದಿ:ಗೆದ್ದೇ ಗೆಲ್ತಾರೆ ಅಂದುಕೊಂಡವರೇ ಸೋತುಬಿಟ್ರು : ಉಲ್ಟಾ ಆಯ್ತು ರಾಜಕೀಯ ಲೆಕ್ಕಾಚಾರ..!

ಅರಾವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ನನಗೆ 68 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ ಮತದಾರರಿಗೆ ನನ್ನ ಧನ್ಯವಾದಗಳು. ನನ್ನ ಪರವಾಗಿ ಶ್ರಮಿಸಿದ ಪಕ್ಷದ ಹಿರಿಯರಿಗೂ, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ.

ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಅಣ್ಣಾಮಲೈ ಅವರು ನಂತರ ತಮಿಳುನಾಡಿನಲ್ಲಿ ನೆಲೆಸಿದ್ದರು. ನಂತರ ಬಿಜೆಪಿ ಪಕ್ಷಕ್ಕೆ ಸೇರಿದ್ದ ಅವರು ತಮ್ಮ ಹುಟ್ಟೂರು ಅರಾವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next