Advertisement

ಶಿಕ್ಷಕ-ಉಪನ್ಯಾಸಕರಿಗೆ ಪ್ಯಾಕೇಜ್‌ ಘೋಷಿಸಿ

02:28 PM May 23, 2020 | Suhan S |

ಕೊಪ್ಪಳ: ರಾಜ್ಯದಲ್ಲಿ ಕಾರ್ಯ ನಿರ್ವಹಿಸುವ ಅತಿಥಿ ಉಪನ್ಯಾಸಕರು ಹಾಗೂ ಖಾಸಗಿ ಶಾಲಾ-ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರಿಗೆ ಸರ್ಕಾರ ಪ್ಯಾಕೇಜ್‌ ಘೋಷಿಸಬೇಕೆಂದು ಆಗ್ರಹಿಸಿ ಶಿಕ್ಷಣ ಉಳಿಸಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

Advertisement

ಲಾಕ್‌ಡೌನ್‌ ಅವಧಿಯಲ್ಲಿ ಸಂಬಳ ನೀಡುವುದಿರಲಿ, ಹಲವಾರು ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಎಷ್ಟೋ ತಿಂಗಳುಗಳಿಂದ ಉಪನ್ಯಾಸಕ ಹಾಗೂ ಶಿಕ್ಷಕರಿಗೆ ವೇತನವನ್ನೇ ನೀಡಿಲ್ಲ. ಇದರಿಂದ ಅವರ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಈ ಕೂಡಲೇ, ಖಾಸಗಿ ಶಾಲೆಗಳು, ಕಾಲೇಜುಗಳು, ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪರಿಹಾರದ ಪ್ಯಾಕೇಜ್‌ ಘೋಷಿಸಬೇಕು. ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ದುಡಿಯುತ್ತಿರುವ ಅತಿಥಿ ಬೋಧಕ ಸಿಬ್ಬಂದಿಗೆ ಪರಿಹಾರದ ಪ್ಯಾಕೇಜ್‌ ಘೋಷಿಸಬೇಕು. ಖಾಸಗಿ ಶಾಲಾಕಾಲೇಜುಗಳ ಎಲ್ಲಾ ಬೋಧಕೇತರ ಸಿಬ್ಬಂದಿಗೆ ಪರಿಹಾರ ನಿನೀಡಬೇಕು. ಲಾಕ್‌ಡೌನ್‌ ಅವಧಿಯಲ್ಲಿ ವೇತನ ನೀಡುವುದನ್ನು ಖಾತ್ರಿಪಡಿಸಿ, ಸಂಬಳ ತಡೆ ಹಿಡಿಯದಂತೆ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಬೇಕು. ಎಲ್ಲ ಶಿಕ್ಷಣ ಸಂಸ್ಥೆಗಳ ಬೋಧಕರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು, ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಉದ್ಯೋಗ ಭದ್ರತೆ ಖಾತ್ರಿಪಡಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಶಿಕ್ಷಣ ಉಳಿಸಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next