Advertisement

ಈಡಿಗ ಸಮಾಜಕ್ಕೆ ನಿಗಮ ಮಂಡಳಿ ಘೋಷಿಸಿ

12:28 PM Feb 24, 2022 | Team Udayavani |

ಚಿಂಚೋಳಿ: ಆರ್ಯ ಈಡಿಗ ಸಮಾಜಕ್ಕೆ ನಿಗಮ ಮಂಡಳಿ ಘೋಷಿಸಿ, 500 ಕೋಟಿ ರೂ. ಮೀಸಲಿಡಬೇಕು ಎಂದು ಆರ್ಯ ಈಡಿಗ ಮಹಾ ಮಂಡಳಿ ರಾಷ್ಟ್ರೀಯ ಅಧ್ಯಕ್ಷ ಡಾ|ಪ್ರಣವಾನಂದ ಸ್ವಾಮೀಜಿ ಸರ್ಕಾರಕ್ಕೆ ಆಗ್ರಹಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಯ ಈಡಿಗ ಸಮಾಜ ಕುಲಕಸುಬಾದ ಸೇಂದಿ ಇಳಿಸುವ ಕೆಲಸ ಮಾಡುತ್ತಿದ್ದಾಗ 1990ರಲ್ಲಿ ಸರ್ಕಾರ ಸೇಂದಿ ಇಳಿಸುವುದನ್ನು ನಿಷೇಧಿಸಿತು. ಈಗ ಪರ್ಯಾಯವಾಗಿ ಯಾವ ಕಸುಬು ಇಲ್ಲದಂತಾಗಿ. ಆರ್ಥಿಕ ಸಂಕಷ್ಟ ಉಂಟಾಗಿದೆ. ಸದ್ಯ 16 ಶಾಸಕರು, ಆರು ಸಂಸದರು ಇದ್ದರೂ ಸಮುದಾಯ ತೀರಾ ಹಿಂದುಳಿದಿದೆ ಎಂದರು.

ಮಾಜಿ ಮುಖ್ಯಮಂತ್ರಿ ದಿ| ಎಸ್‌. ಬಂಗಾರಪ್ಪ ನಂತರ ನಮ್ಮ ಸಮಾಜಕ್ಕೆ ಸರ್ಕಾರ ಯಾವುದೇ ನ್ಯಾಯ ದೊರಕಿಸುವ ಪ್ರಯತ್ನ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಈಡಿಗ ಸಮಾಜವನ್ನು ಕಡೆಗಾಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next