Advertisement

ಯಾದಗಿರಿ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ! ಸೋದರ ಮಾವನಿಂದಲೇ ಕೃತ್ಯ

03:48 PM Sep 14, 2021 | Team Udayavani |

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು ಎಂಟು ತಿಂಗಳ ಹಿಂದೆ ನಡೆದ ಘಟನೆ ತಡವಾಗಿ ಸುದ್ದಿಯಾಗಿದೆ.

Advertisement

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ ಸೋದರ ಮಾವ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಯುವತಿಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಹಣಮಂತ ಎಂಬಾತನನ್ನು ಬಂಧಿಸಿದ್ದಾರೆ.

ವಡಗೇರಾ ತಾಲೂಕಿನ ಗುರುಸಣಗಿ ಗ್ರಾಮದ ಹಣಮಂತ ಎಂಬಾತ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ್ದ. ಯುವತಿಯು ಮಹಾರಾಷ್ಟ್ರದ ಪುಣೆದಲ್ಲಿ ಪೋಷಕರ ಜೊತೆ ವಾಸವಾಗಿದ್ದರು. ಕಳೆದ ಎಂಟು ತಿಂಗಳ ಹಿಂದೆ ಯುವತಿಯ ಅಜ್ಜಿ ಮೃತ ಪಟ್ಟ ಹಿನ್ನೆಲೆಯಲ್ಲಿ, ಅಂತ್ಯಕ್ರಿಯೆ ಕಾರ್ಯದಲ್ಲಿ ಭಾಗವಹಿಸಲು ಬಂದಿದ್ದರು. ಈ ವೇಳೆ ಯುವತಿಯನ್ನು ಮದುವೆ ಯಾಗುವದಾಗಿ ನಂಬಿಸಿದ್ದ ಯುವಕ ಅತ್ಯಾಚಾರವೆಸಗಿದ್ದ. ಅದೇ ರೀತಿ ಪುಣೆಗೆ ತೆರಳಿ ಅಲ್ಲಿಯೂ ಅತ್ಯಾಚಾರ ಮಾಡಿದ್ದ.

ಇದನ್ನೂ ಓದಿ:ಅವಿವಾಹಿತ ಯುವತಿಯ ಅವಧಿಪೂರ್ವ ಪ್ರಸವ: ಡಿಎನ್ ಎ ಪರೀಕ್ಷೆಗೆ ಮುಂದಾದ ಪೊಲೀಸರು!

ಯುವತಿಯನ್ನು ಅತ್ಯಾಚಾರ ಮಾಡಿದ್ದ ಹಣಮಂತ, ಈ ಬಗ್ಗೆ ಯಾರಿಗೂ ಹೇಳಬೇಡವೆಂದು ಯುವತಿಯನ್ನು ಬೆದರಿಸಿದ್ದ. ಬಳಿಕ ಊರಿಗೆ ಬಂದು ಆತ, ಬೇರೆ ಯುವತಿಯ ಜೊತೆ ನಿಶ್ಚಿತರ್ಥ ಮಾಡಿಕೊಂಡಿದ್ದ. ಈ ಬಗ್ಗೆ ಮಾಹಿತಿ ಅರಿತ ಯುವತಿ ಅತ್ಯಾಚಾರ ನಡೆಸಿದ ಬಗ್ಗೆ ಯಾದಗಿರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಹಣಮಂತನನ್ನು ಬಂಧಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next