Advertisement

ಕಪ್ಪು ಶಿಲೀಂಧ್ರ ಸೋಂಕಿಗೆ ಉಡುಪಿಯಲ್ಲಿ ಮತ್ತೊಂದು ಬಲಿ

09:44 AM Jun 05, 2021 | Team Udayavani |

ಉಡುಪಿ: ಕಳೆದ ಮೇ 30ರಂದು ಕಪ್ಪು ಶಿಲೀಂಧ್ರ ಸೋಂಕು ಪತ್ತೆಯಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯಲ್ಲಿದ್ದ ಉಡುಪಿ ಸಮೀಪದ ಕಡೆಕಾರಿನ 55 ವರ್ಷ ಪ್ರಾಯದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.

Advertisement

ಈ ಮೂಲಕ ಜಿಲ್ಲೆಯಲ್ಲಿ ಕಪ್ಪು ಶಿಲೀಂಧ್ರಕ್ಕೆ ಎರಡನೇ ಬಲಿಯಾಗಿದೆ. ಈ ಮೊದಲು ಸಂತೆಕಟ್ಟೆಯ 76ರ ಹರೆಯ ಮಹಿಳೆಯೊಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿನಿಂದ ಮೃತಪಟ್ಟಿದ್ದರು.

ಇದನ್ನೂ ಓದಿ: ರವಿವಾರವೂ ಬ್ಯಾಂಕ್‌ ಖಾತೆಗೆ ಹಣ ಜಮೆ : ಆ. 1ರಿಂದ ಹಣಕಾಸು ವರ್ಗಾವಣೆಯಲ್ಲಿ ಹೊಸ ವ್ಯವಸ್ಥೆ

ಸದ್ಯ ಮಣಿಪಾಲದಲ್ಲಿ ಜಿಲ್ಲೆಯ ಇನ್ನೂ ಇಬ್ಬರು ಹಾಗೂ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಕುಂದಾಪುರ ನಾಗೂರಿನ 55 ವರ್ಷ ಪ್ರಾಯದ ಮಹಿಳೆ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಶಂಕಿತ ಕಪ್ಪು ಶೀಲೀಂದ್ರ ಸೋಂಕಿಗಾಗಿ ಕುಂದಾಪುರದ ವ್ಯಕ್ತಿಯೊಬ್ಬರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಅದಿನ್ನೂ ಖಚಿತಗೊಳ್ಳಬೇಕಿದೆ ಎಂದು ಜಿಲ್ಲಾಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ:  ವಿದ್ಯುತ್‌ ಬಿಲ್‌: ಮುಂದಿನ ವರ್ಷ ಎಂಬಿಇಡಿ ಜಾರಿ?

Advertisement
Advertisement

Udayavani is now on Telegram. Click here to join our channel and stay updated with the latest news.

Next