Advertisement

ಬ್ರಹ್ಮಗಿರಿ ಬೆಟ್ಟ ದುರಂತ: ಕೊಳೆತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆ!

02:20 PM Aug 15, 2020 | keerthan |

ಮಡಿಕೇರಿ: ಮಹಾಮಳೆಯಿಂದ ಬೆಟ್ಟ ಕುಸಿದು ಐವರು ನಾಪತ್ತೆಯಾದ ತಲಕಾವೇರಿ ಪ್ರದೇಶದಲ್ಲಿ ಮತ್ತೊಂದು ‌ಮೃತ ದೇಹ ಪತ್ತೆಯಾಗಿದೆ.

Advertisement

ಶವ ಕೊಳೆತ ಸ್ಥಿತಿಯಲ್ಲಿರುವುದರಿಂದ ಗುರುತು ಪತ್ತೆಯಾಗಿಲ್ಲ.

ಈಗಾಗಲೇ ಆನಂದತೀರ್ಥ, ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದ್ದು, ಇಂದು ದೊರೆತ ಶವದೊಂದಿಗೆ ಮೂವರು ಪತ್ತೆಯಾದಂತ್ತಾಗಿದೆ. ಉಳಿದ ಇಬ್ಬರಿಗಾಗಿ ಕಾರ್ಯಾಚರಣೆ ಚುರುಕುಗೊಂಡಿದೆ.

ಆ.6ರಂದು ಇಲ್ಲಿನ ಬ್ರಹ್ಮಗಿರಿ ಬೆಟ್ಟ ಕುಸಿದು ನಾರಾಯಣ ಆಚಾರ್ ಸೇರಿದಂತೆ ಐವರು ಮಣ್ಣಿನಡಿ ಬಿದ್ದು ನಾಪತ್ತೆಯಾಗಿದ್ದರು. ಅರ್ಚಕ ನಾರಾಯಣ ಆಚಾರ್, ಸಹೋದರ ಆನಂದ ತೀರ್ಥ, ಪತ್ನಿ ಶಾಂತ, ಸಹಾಯಕ ಅರ್ಚಕರಾದ ರವಿಕಿರಣ್ ಹಾಗೂ ಶ್ರೀನಿವಾಸ್ ಅವರು ನಾಪತ್ತೆಯಾಗಿದ್ದರು. ಈ ಪೈಕಿ ಆನಂದ ತೀರ್ಥ ಅವರ ಮೃತದೇಹ ಆ.8ರಂದು ಪತ್ತೆಯಾಗಿದ್ದರೆ, ಆ.11ರಂದು ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next