Advertisement

ಉ.ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಮತ್ತೋರ್ವ ದಲಿತ ಯುವತಿಯ ಅತ್ಯಾಚಾರಗೈದು ಕೊಲೆ

12:23 PM Oct 01, 2020 | keerthan |

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಆಕ್ರೋಶದ ಕಿಚ್ಚು ಆರಿಲ್ಲ. ಅಷ್ಟರಲ್ಲಿ ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಮತ್ತೋರ್ವ ದಲಿತ ಯುವತಿಯನ್ನು ಸಾಮೂಹಿಕವಾಗಿ ಅತ್ಯಾಚಾರಗೈದು ಕೊಲೆಗೈದ ಘಟನೆ ವರದಿಯಾಗಿದೆ.

Advertisement

ಬಲರಾಮಪುರ ಜಿಲ್ಲೆಯ ಗೈಸರಿ ಗ್ರಾಮದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ.

ಕಳೆದ ಮಂಗಳವಾರ ಘಟನೆ ನಡೆದಿದ್ದು, ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿ ಸಮೀಪದ ಪಟ್ಟಣದಲ್ಲಿರುವ ಕಾಲೇಜಿಗೆ ಫೀಸ್ ಕಟ್ಟಲು ತೆರಳಿದ್ದಳು. ಕಾಲೇಜಿನಿಂದ ಹಿಂದೆ ಬರುವಾಗ ದಾರಿ ಮಧ್ಯೆ ಆಕೆಯನ್ನು ಅಪಹರಿಸಿ ಆಕೆಯನ್ನು ಅತ್ಯಾಚಾರ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.

ಇದನ್ನೂ ಓದಿ:ಯಾರ ದೇಹ ಸುಟ್ಟಿದ್ದಾರೆ ಎಂಬುದು ಗೊತ್ತಿಲ್ಲ: ಹತ್ರಾಸ್‌ ಸಂತ್ರಸ್ತೆಯ ಕುಟುಂಬಸ್ಥರ ಅಳಲು

ಅತ್ಯಾಚಾರಕ್ಕೆ ಒಳಗಾದ ಯುವತಿ ನಂತರ ರಿಕ್ಷಾದಲ್ಲಿ ಮನೆಗೆ ಬಂದಿದ್ದು, ಆಕೆಯ ಕಾಲು ಮತ್ತು ಬೆನ್ನುಮೂಳೆ ಮುರಿತವಾಗಿತ್ತು. ಗಂಭೀರ ಪರಿಸ್ಥಿತಿಯಲ್ಲಿದ್ದ ಆಕೆ ಮನೆಯವರಿಗೆ ವಿಚಾರ ತಿಳಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆ ದಾರಿ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

Advertisement

ಯುವತಿಯ ಮನೆಯವರು ನೀಡಿರುವ ದೂರಿನ ಪ್ರಕಾರ, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಶಾಹೀದ್ ಮತ್ತು ಸಾಹಿಲ್ ಎಂದು ಗುರುತಿಸಲಾಗಿದೆ.

ಪೊಲೀಸ್ ವರದಿ ಪ್ರಕಾರ, ಗೈಸರಿ ಗ್ರಾಮದ ಕಿರಾಣಿ ಅಂಗಡಿಯ ಹಿಂಬದಿಯ ಕೋಣೆಯಲ್ಲಿ ಅತ್ಯಾಚಾರ ಮಾಡಲಾಗಿದೆ. ಯುವತಿಯ ಚಪ್ಪಲಿಗಳು ಅಂಗಡಿಯ ಬಳಿ ಪತ್ತೆಯಾಗಿದೆ. ಅಂಗಡಿ ಮಾಲೀಕನೇ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next