Advertisement

Karnataka: ದ್ವಿತೀಯ ಪಿಯು ಪ್ರ್ಯಾಕ್ಟಿಕಲ್‌ಗೆ ಬೇರೆ ಕಾಲೇಜು ನಿರ್ಧಾರಕ್ಕೆ ತಡೆ

02:27 AM Oct 10, 2024 | Team Udayavani |

ಬೆಂಗಳೂರು: ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ಪ್ರಸಕ್ತ ಸಾಲಿನಿಂದ ವಿದ್ಯಾರ್ಥಿಗಳು ಬೇರೆ ಕಾಲೇಜುಗಳಿಗೆ ತೆರಳಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿರುವುದನ್ನು ತಡೆ ಹಿಡಿದಿದೆ.

Advertisement

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸೂಚನೆ ಮೇರೆಗೆ ಮಂಡಳಿ ಹೊರಡಿಸಿದ್ದ ಸುತ್ತೋಲೆಯನ್ನು ತಡೆ ಹಿಡಿದಿದೆ. ಹಿಂದೆ ಇದ್ದ ವ್ಯವಸ್ಥೆಯೇ ಮುಂದುವರಿಯಲಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ಪ್ರಯೋ ಗಾಲಯಗಳಿದ್ದರೆ ಅಲ್ಲೇ ಪರೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ. ಇಲ್ಲದಿದ್ದಲ್ಲಿ ಸಮೀಪದ ಕಾಲೇಜಿಗೆ ತೆರಳ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next