Advertisement

ಬೆಳ್ತಂಗಡಿ ತಾಲೂಕಿನ ಕರಾಯದ ಯುವಕನಲ್ಲಿ ಕೋವಿಡ್ 19 ಪಾಸಿಟಿವ್ ದೃಢ

09:38 AM Mar 28, 2020 | Hari Prasad |

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕಿನ ಮತ್ತೊಂದು ಪ್ರಕರಣ ಇಂದು ದೃಢಗೊಂಡಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ಯುವಕನಲ್ಲಿ ಈ ವೈರಸ್ ಪಾಸಿಟಿವ್ ಆಗಿರುವುದು ಇಂದು ಪತ್ತೆಯಾಗಿದೆ. ಈ ಯುವಕ ಮಾರ್ಚ್ 21ರಂದು ದುಬಾಯಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಮತ್ತು ಆ ಬಳಿಕ ಕೆ.ಎಸ್.ಆರ್.ಟಿ.ಸಿ. ಬಸ್ಸಿನ ಮೂಲಕ ಕರಾಯದಲ್ಲಿರುವ ತನ್ನ ಮನೆಗೆ ಬಂದಿದ್ದ.

Advertisement

ಬಳಿಕ ಈ ಯುವಕನಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದ ಕಾರಣದಿಂದ ಮಾರ್ಚ್ 24ರಂದು ಪುತ್ತೂರಿನ ಆಸ್ಪತ್ರೆ ದಾಖಲುಗೊಂಡಿದ್ದ. ಈ ಸಂದರ್ಭದಲ್ಲಿ ಈತನ ಗಂಟಲು ಸ್ರಾವ ಮಾದರಿಯನ್ನು ತಪಾಸಣೆಗೆ ಕಳುಹಿಸಿಕೊಡಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಇಂದು ಕೈಸೇರಿದ್ದು ಇದರಲ್ಲಿ ಈ ಯುವಕನಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ.

ಇದೀಗ ವೈರಸ್ ಸೋಂಕಿತ ಯುವಕನನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈತನ ಟ್ರಾವೆಲ್ ಹಿಸ್ಟರಿ ಮತ್ತು ಕಾಂಟ್ಯಾಕ್ಟ್ ಹಿಸ್ಟರಿಗಳನ್ನು ಕಂಡುಹಿಡಿಯಲಾಗುತ್ತಿದೆ. ಈ ಎಲ್ಲಾ ಮಾಹಿತಿಗಳನ್ನು ಜಿಲ್ಲಾ ಆರೋಗ್ಯ ಅಧಿಕಾರಿಯವರು ಇಂದು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next