Advertisement

ಕೋವಿಡ್ ಸೋಂಕಿಗೆ ಮತ್ತೊಂದು ಬಲಿ: ಪುತ್ತೂರಿನ ಮಾಡ್ನೂರು ಗ್ರಾಮದ ವ್ಯಕ್ತಿ ಸಾವು

01:04 PM Jul 12, 2020 | keerthan |

ಪುತ್ತೂರು: ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಕೋವಿಡ್ ಪಾಸಿಟಿವ್ ಆಗದ್ದ ಮಾಡ್ನೂರು ಗ್ರಾಮದ ವ್ಯಕ್ತಿಇಂದು ಸಾವನ್ನಪ್ಪಿದ್ದಾರೆ.

Advertisement

ಮಾಡ್ನೂರು ಗ್ರಾಮದ ಮೂಲಡ್ಕದ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೋವಿಡ್-19 ಸೋಂಕು ತಾಗಿರುವುದು ದೃಢಪಟ್ಟಿತ್ತು. ಆದರೆ ಇಂದು ತೀರಾ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ನ್ಯೂಮುನಿಯಾ ಹಿನ್ನೆಲೆಯಲ್ಲಿ ಮೊದಲು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ತೀರಾ ಗಂಭೀರ ಸ್ಥಿತಿಗೆ ಒಳಗಾದ ಕಾರಣ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೋವಿಡ್-19 ದೃಢಪಟ್ಟಿದ್ದು, ಜು.12ರಂದು ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು ಮಾಡ್ನೂರು ಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ರೈ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು ಕೋವಿಡ್ 19 ಕಾರಣದಿಂದ ಮತ್ತೊಂದು ಸಾವು ಸಂಭವಿಸಿದೆ.  ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸಾವು 60 ವರ್ಷದ ವೃದ್ಧ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next