Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿ

10:43 AM Jul 06, 2020 | keerthan |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಅಂಕೆ ಮೀರಿ ಹರಡುತ್ತಿದೆ. ಸೋಂಕಿನ ಕಾರಣದಿಂದ ಇಂದು ಮತ್ತೋರ್ವ ಸಾವನ್ನಪ್ಪಿದ್ದು, ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 23ಕ್ಕೇರಿದೆ.

Advertisement

ಮಂಗಗಳೂರು ಹೊರಲಯದ ಸಂತೋಷ್ ನಗರ ನಿವಾಸಿ ಇಂದು ಸಾವನ್ನಪ್ಪಿದ್ದಾರೆ. 52 ವರ್ಷ ಪ್ರಾಯದ ಅವರು ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಭಾರಿ ವೇಗದಲ್ಲಿ ಏರಿಕೆ ಕಾಣುತ್ತಿದೆ. ರವಿವಾರ ಒಂದೇ ದಿನ ಜಿಲ್ಲೆಯಲ್ಲಿ 147 ಮಂದಿ ಹೊಸ ಸೋಂಕಿತರ ಕಂಡುಬಂದಿದ್ದರು. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1234ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ರವಿವಾರ ಒಂದೇ ದಿನ 48 ಜನರಿಗೆ ಕೋವಿಡ್ -19 ಸೋಂಕು ದೃಢವಾಗಿತ್ತು. ರಾಂಡಮ್ ಪರೀಕ್ಷೆ ನಡೆಸಿದಾಗ ಹೆಚ್ಚಿನವರಲ್ಲಿ ಕೋವಿಡ್ -19 ಸೋಂಕು ದೃಢವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next