Advertisement

ಕೊಪ್ಪದ ವೃದ್ಧೆ ಸಾವು: ಕಾಫಿನಾಡಿನಲ್ಲಿ ಕೋವಿಡ್-19 ಗೆ ಎಂಟನೇ ಬಲಿ

01:28 PM Jul 19, 2020 | keerthan |

ಚಿಕ್ಕಮಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಸಂಕಟ ಆರಂಭವಾದ ದಿನಗಳಲ್ಲಿ ಗ್ರೀನ್ ಜೋನ್ ನಲ್ಲಿದ್ದ ಚಿಕ್ಕಮಗಳೂರಿನಲ್ಲಿ ಈಗ ಕೋವಿಡ್ ಕಂಟಕ ಜನರನ್ನು ಭೀತರನ್ನಾಗಿಸಿದೆ.

Advertisement

ಜಿಲ್ಲೆಯ ಕೊಪ್ಪ ತಾಲೂಕಿನ ಕೋವಿಡ್ 19 ಸೋಂಕಿತ 70 ವರ್ಷದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಈ ವೃದ್ಧೆಯು ಮಧುಮೇಹ, ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರು. ಇದರೊಂದಿಗೆ ಉಸಿರಾಟದ ಸಮಸ್ಯೆಯಿಂದಲೂ ಬಳಲುತ್ತಿದ್ದ ವೃದ್ಧೆಯನ್ನು ಮೂರು ದಿನದ ಹಿಂದೆ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಇವರು ಸಾವನ್ನಪ್ಪಿದ್ದಾರೆ.

ಈ ವೃದ್ದೆಯ ಹೆಣ್ಣು ಮಕ್ಕಳು ಹಾಗೂ ಅಳಿಯನಿಗೂ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next