Advertisement

ತೌಕ್ತೇ ಚಂಡಮಾರುತ ಆಯ್ತು..ಮೇ 23ರಂದು “ಯಾಸ್”ಚಂಡಮಾರುತದ ಅಬ್ಬರ ಸಾಧ್ಯತೆ!

11:37 AM May 19, 2021 | Team Udayavani |

ನವದೆಹಲಿ: ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಎದ್ದ ತೌಕ್ತೇ ಚಂಡಮಾರುತ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಅಪಾರ ಹಾನಿ ಉಂಟುಮಾಡಿದ್ದ ಬೆನ್ನಲ್ಲೇ ಇದೀಗ ಮೇ 23ರ ಸುಮಾರಿಗೆ ಮತ್ತೊಂದು ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಇದನ್ನೂ ಓದಿ:ಸರ್ಕಾರ ನಡೆಸುವ ಮಂದಿ ಹೆಣದ ಮೇಲೆ ದುಡ್ಡು ಎತ್ತಲು ಹೋಗಬೇಡಿ : ಹೆಚ್.ವಿಶ್ವನಾಥ್ ವಾಗ್ದಾಳಿ

ಈ ಚಂಡಮಾರುತ ಬಂಗಾಳಕೊಲ್ಲಿ ಸಮುದ್ರಭಾಗದಲ್ಲಿ ಮೇ 23ರಂದು ಕಡಿಮೆ ಪ್ರಮಾಣದ ಒತ್ತಡದಲ್ಲಿ ಬೀಸಲಿದ್ದು, ಇದಕ್ಕೆ “ಯಾಸ್” ಎಂದು ಹೆಸರಿಡಲು ನಿರ್ಧರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ ಮುಂದಿನ ವಾರದಲ್ಲಿ ಬಂಗಾಳ ಕೊಲ್ಲಿ ಪ್ರದೇಶದಲ್ಲಿ ಈ ಚಂಡಮಾರುತ ಕಡಿಮೆ ಪ್ರಮಾಣದ ಒತ್ತಡದಲ್ಲಿ ಕಾಣಿಸಿಕೊಳ್ಳಲಿದ್ದು, ನಂತರ ಇದು ತೀವ್ರವಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ. ಈ ಚಂಡಮಾರುತದ ಮುಂದಿನ ಬೆಳವಣಿಗೆ ನೋಡಿ ಅಧಿಕೃತವಾಗಿ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಹವಾಮಾನ ಇಲಾಖೆಯ ಪ್ರಭಾರ ಅಧಿಕಾರಿ ಸುನೀತಾ ದೇವಿ ತಿಳಿಸಿದ್ದಾರೆ.

ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯ ಮೇಲ್ಮೈ ಉಷ್ಣಾಂಶವು 1-2 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಿದೆ. ಇದು ಚಂಡಮಾರುತದ ಬೆಳವಣಿಗೆಗೆ ಅನುಕೂಲಕರವಾಗಿದೆ ಎಂದು ವಿವರಿಸಿದೆ. ಹವಾಮಾನ ಇಲಾಖೆ ಪ್ರಕಾರ, ಈ ಚಂಡಮಾರುತ ಮಯನ್ಮಾರ್ ನತ್ತ ಸಾಗುವ ಸಾಧ್ಯತೆ ಇದ್ದು ಭಾರತಕ್ಕೆ ಅಪ್ಪಳಿಸುವ ಸಂಭವ ಕಡಿಮೆ ಇದೆ ಎಂದು ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next