Advertisement

ಕೋವಿಡ್-19 ಸೋಂಕಿಗೆ ಕರ್ನಾಟಕದಲ್ಲಿ ಮತ್ತೊಂದು ಬಲಿ

11:14 AM Mar 27, 2020 | keerthan |

ಬಳ್ಳಾರಿ: ಕೋವಿಡ್-19 ಸೋಂಕಿನಿಂದಾಗಿ ಕರ್ನಾಟಕದಲ್ಲಿ ಮತ್ತೊಂದು ಬಲಿಯಾಗಿದೆ. ಬುಧವಾರ ಗೌರಿಬಿದನೂರಿನಲ್ಲಿ ಸಾವನ್ನಪ್ಪಿದ್ದ ಮಹಿಳೆಗೆ ಕೋವಿಡ್-19 ಸೋಂಕು ಇರುವುದು ಇಂದು ದೃಢವಾಗಿದೆ.

Advertisement

ಬಳ್ಳಾರಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಬಿ.ಶ್ರಿರಾಮುಲು, ಬುಧವಾರ ಸಾವನ್ನಪ್ಪಿದ ಮಹಿಳೆಯ ವರದಿ ಇಂದು ಬಂದಿದ್ದು, ಅವರು ಕೋವಿಡ್-19 ಸೋಂಕಿನಿಂದಲೇ ಸಾವನ್ನಪ್ಪಿರುವುದಾಗಿ ವರದಿ ಬಂದಿದೆ ಎಂದರು.

ಮೆಕ್ಕಾದಿಂದ ಆಗಮಿಸಿದ್ದ 75 ವರ್ಷದ ವ್ಯಕ್ತಿ ನಿನ್ನೆ ಬೌರಿಂಗ್ ಆಸ್ಪತ್ರೆಯಲ್ಲಿ ಮೃತರಾಗಿದ್ದರು. ಇವರು ಗೌರಿಬಿದನೂರಿನ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ  ಚಿಕಿತ್ಸೆಯಲ್ಲಿದ್ದರು.  ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ಮಂಗಳವಾರ ಅವರನ್ನು ಬೌರಿಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next