Advertisement

ಮತ್ತೊಂದು ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆಗೈದ ಭಧ್ರತಾ ಪಡೆಗಳು

11:30 AM May 04, 2023 | keerthan |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಕಳೆದ 24 ಗಂಟೆಗಳಲ್ಲಿ ಇದು ಎರಡನೇ ಎನ್‌ಕೌಂಟರ್ ಆಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಭಯೋತ್ಪಾದಕರು ದೊಡ್ಡ ದಾಳಿಗೆ ತಯಾರಿ ನಡೆಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ.

ವನಿಗಮ್ ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಪೂರ್ವಭಾವಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ ನ ಗಡಿ ನಿಯಂತ್ರಣ ರೇಖೆಯಲ್ಲಿ ಪೊಲೀಸರು ಮತ್ತು ಸೇನೆಯು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿತು. ಕಾರ್ಯಾಚರಣೆ ವೇಳೆ ಇಬ್ಬರು ಅಪರಿಚಿತ ಭಯೋತ್ಪಾದಕರು ಹತರಾಗಿದ್ದಾರೆ. ಎನ್‌ ಕೌಂಟರ್ ಸ್ಥಳದಿಂದ ಎರಡು ಎಕೆ ರೈಫಲ್‌ಗಳು ಮತ್ತು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈತನ್ಮಧ್ಯೆ, ಭಯೋತ್ಪಾದಕರು ಈ ಪ್ರದೇಶದಲ್ಲಿ ಕೆಲವು ಪ್ರಮುಖ ದಾಳಿಗಳಿಗೆ ತಯಾರಿ ನಡೆಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

Advertisement

ಜಮ್ಮು-ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಎಲ್ಲಾ ಸೇನಾ ಸ್ಥಾಪನೆಗಳನ್ನು ಅಲರ್ಟ್ ಮಾಡಲಾಗಿದೆ. ಜಮ್ಮು, ಸಾಂಬಾ ಮತ್ತು ಕಥುವಾದಲ್ಲಿನ ಕಂಟೋನ್ಮೆಂಟ್ ಪ್ರದೇಶಗಳೊಳಗಿನ ಶಾಲೆಗಳನ್ನು ಬುಧವಾರ ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next