Advertisement

ಶ್ರೀನಗರದಲ್ಲಿ ಮತ್ತೊಂದು ಎನ್ ಕೌಂಟರ್: 24 ಗಂಟೆಯಲ್ಲಿ 9 ಮಂದಿ ಉಗ್ರರ ಹತ್ಯೆಗೈದ ಸೇನೆ

10:13 AM Dec 31, 2021 | Team Udayavani |

ಶ್ರೀನಗರ: ಪೊಲೀಸ್ ಬಸ್ ಮೇಲೆ ದಾಳಿ ಮಾಡಿದ್ದ ಉಗ್ರ ಸೇರಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ. ಶ್ರೀನಗರದಲ್ಲಿ ಕಳೆದ ರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸೇರಿ ಮೂವರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಮೂವರು ಪೊಲೀಸರು ಮತ್ತು ಓರ್ವ ಸಿಆರ್ ಪಿಎಫ್ ಜವಾನ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ಯೆಯಾದ ಜೈಶ್ ಎ ಮೊಹಮ್ಮದ್ ಉಗ್ರನನ್ನು ಸುಹೈಲ್ ಅಹಮದ್ ಎಂದು ಗುರುತಿಸಲಾಗಿದೆ. ಆತ ಶ್ರೀನಗರದ ಹೊರವಲಯದ ಝೇವಾನ್ ನಲ್ಲಿ ಪೊಲೀಸ್ ಕ್ಯಾಂಪ್ ನಲ್ಲಿ ಬಸ್ ಮೇಲೆ ದಾಳಿ ನಡೆಸಿದ್ದ.

ಇದನ್ನೂ ಓದಿ:ಒಕ್ಕಲಿಗರ ಸಂಘದ ಚುನಾವಣೆ: ಹೈಕೋರ್ಟ್‌ ನೋಟಿಸ್‌

ಈ ಕಾರ್ಯಾಚರಣೆಯೊಂದಿಗೆ, ಜಮ್ಮು ಮತ್ತು ಕಾಶ್ಮೀರ ಸಶಸ್ತ್ರ ಪೊಲೀಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕ ದಾಳಿಯಲ್ಲಿ ಭಾಗಿಯಾಗಿದ್ದ ಎಲ್ಲಾ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಕಳೆದ 24 ಗಂಟೆಯಲ್ಲಿ ಮೂರು ಎನ್ ಕೌಂಟರ್ ನಲ್ಲಿ ಒಟ್ಟು 24 ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿದೆ. ಗುರುವಾರ ಅನಂತ್ ನಾಗ್ ಮತ್ತು ಕುಲ್ಗಾಂವ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಆರು ಮಂದಿ ಉಗ್ರರನ್ನು ಹತ್ಯೆ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next