Advertisement

ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಫೋಟ ನಡೆದು ಆರು ಮಂದಿ ಸಾವು, ಓರ್ವನಿಗೆ ಗಾಯ!

11:55 AM Feb 23, 2021 | Team Udayavani |

ಚಿಕ್ಕಬಳ್ಳಾಪುರ: ಶಿವಮೊಗ್ಗದಲ್ಲಿ ನಡೆದ ಸ್ಪೋಟದ ನೆನಪು ಜನಮಾನಸದಿಂದ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ನಡೆದಿದೆ. ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟು, ಓರ್ವ ಗಾಯಗೊಂಡಿದ್ದಾರೆ.

Advertisement

ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಪೆಟ್ರೋಲ್‌ ಶತಕದಾಟ : ಜನರ ಬದುಕಿನೊಂದಿಗೆ ಸರಕಾರದ ಚೆಲ್ಲಾಟ

ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಸುಮಾರು 10 ಕಿ.ಮೀಟರ್ ದೂರದವರೆಗೂ ಭೂಮಿ ಕಂಪಿಸಿದ ಅನುಭವವಾಗಿದೆ. ನೂರಾರು ಮೀಟರ್ ದೂರದವರೆಗೆ ಮೃತದೇಹಗಳು ಛಿದ್ರವಾಗಿ ಬಿದ್ದಿವೆ.

Advertisement

ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಆಗಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮದುವೆಗೆ ಕಣ್ಗಾವಲು : 2ನೇ ಅಲೆ ಆತಂಕ ಹಿನ್ನೆಲೆಯಲ್ಲಿ ಸರಕಾರದಿಂದ ಕ್ರಮ

ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next