Advertisement

ಮತ್ತೊಬ್ಬ ಪಕ್ಷೇತರ ಶಾಸಕ ಶಂಕರ್ ರಾಜೀನಾಮೆ, ನವದೆಹಲಿಗೆ ತೆರಳಿದ ಡಿಕೆಶಿ

09:59 AM Jul 09, 2019 | Nagendra Trasi |

ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಪಕ್ಷೇತರ ಶಾಸಕ ನಾಗೇಶ್ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಪಡೆದಿರುವುದಾಗಿ ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ ಬೆನ್ನಲ್ಲೇ ಮತ್ತೊಬ್ಬ ಪಕ್ಷೇತರ ಶಾಸಕ ಶಂಕರ್ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿ ಮುಂಬೈಗೆ ತೆರಳುವ ಮೂಲಕ ಆಡಳಿತರೂಢ ಮೈತ್ರಿ ಸರ್ಕಾರ ಬಹುಮತ ಕಳೆದುಕೊಳ್ಳುವಂತಾಗಿದೆ.

Advertisement

ಸಚಿವ ಆರ್.ಶಂಕರ್ ಕಾಂಗ್ರೆಸ್ ಪಕ್ಷಕ್ಕೆ ಕೈಕೊಟ್ಟು ಮುಂಬೈಗೆ ತೆರಳಿದ್ದು, ಏತನ್ಮಧ್ಯೆ ಸಚಿವ ಡಿಕೆ ಶಿವಕುಮಾರ್ ನವದೆಹಲಿಗೆ ಹೊರಟಿರುವ ಬೆಳವಣಿಗೆ ನಡೆದಿದೆ.

ಕೆಲವು ದಿನಗಳ ಹಿಂದಷ್ಟೇ ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಆರ್.ಶಂಕರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸದ್ಯ ವಿಧಾನಸಭೆಯ ಒಟ್ಟು ಶಾಸಕರ ಬಲ 210, ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ಸಂಖ್ಯೆ 106, ಪಕ್ಷೇತರ ಶಾಸಕ ನಾಗೇಶ್ ಬೆಂಬಲ ಸೇರಿದಂತೆ ಬಿಜೆಪಿ ಶಾಸಕರ ಬಲ 107, ಕಾಂಗ್ರೆಸ್, ಜೆಡಿಎಸ್ ಮೈತ್ರಿ ಪಕ್ಷದ ಬಲ 103ಕ್ಕೆ ಕುಸಿದಿದೆ.

Advertisement

Udayavani is now on Telegram. Click here to join our channel and stay updated with the latest news.

Next