Advertisement

ಮಲೆನಾಡಲ್ಲಿ ಮಂಗನ ಕಾಯಿಲೆ ಹೆಚ್ಚಳ ಭೀತಿ; ಮೂರು ದಿನದಲ್ಲಿ ಮತ್ತೊಬ್ಬರಿಗೆ ಸೋಂಕು

05:10 PM Mar 16, 2023 | keerthan |

ಶಿವಮೊಗ್ಗ: ಬಿಸಿಲ ಧಗೆ ಏರುತ್ತಿದ್ದಂತೆ ಮಲೆನಾಡಿನಲ್ಲಿ ಮಂಗನ ಕಾಯಿಲೆ ಹಾವಳಿ ಹೆಚ್ಚಾಗತೊಡಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಗುತ್ತಿಯಡೆಹಳ್ಳಿ ವ್ಯಾಪ್ತಿಯಲ್ಲಿ ಮತ್ತೊಬ್ಬರಿಗೆ ಕೆಎಫ್‌ ಡಿ (Kyasanur Forest Disease) ಸೋಂಕು ಕಾಣಿಸಿಕೊಂಡಿದೆ.

Advertisement

ಮೂರು ದಿನದ ಹಿಂದೆ ಇದೇ ಗ್ರಾಮದ 54 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿತ್ತು.

ಇದನ್ನೂ ಓದಿ:ವಿಶ್ವದ ಅತ್ಯುತ್ತಮ ಏರ್ಪೋರ್ಟ್ ಗಳ ಪಟ್ಟಿ ಬಿಡುಗಡೆ; ಇಲ್ಲಿದೆ ಟಾಪ್ 20 ವಿ.ನಿಲ್ದಾಣಗಳ ಪಟ್ಟಿ

34 ವರ್ಷದ ಮಹಿಳೆಗೆ ಸೋಂಕು ಕಾಣಿಸಿಕೊಂಡಿದ್ದು ಅವರನ್ನು ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಕುಟುಂಬಸ್ಥರಲ್ಲಿ ಯಾವುದೇ ಸೋಂಕಿನ ಲಕ್ಷಣ ಕಂಡುಬಂದಿಲ್ಲ ಎಂದು ಡಿಎಚ್‌ಒ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next