Advertisement

“ಪ್ರಾರಂಭ’ನಿರ್ಮಾಪಕರಿಂದ ಮತ್ತೊಂದು ಚಿತ್ರ

08:12 AM Jun 06, 2020 | Lakshmi GovindaRaj |

ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಅವರು ನಿರ್ಮಿಸಿ, ಮನು ಕಲ್ಯಾಡಿ ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ನಾಯಕರಾಗಿ ನಟಿಸಿರುವ ಪ್ರಾರಂಭ ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಲಾಕ್ ಡೌನ್ ನಂತರ ತೆರೆಗೆ ಬರಲಿದೆ. ಈಗಾಗಲೇ ಚಿತ್ರ ಬಿಡುಗಡೆಗೆ ಸಿನಿರಸಿಕರು ಕಾತುರದಲಿದ್ದಾರೆ.

Advertisement

ಪ್ರಾರಂಭದ ಮೂಲಕ ಚಿತ್ರರಂಗದಲ್ಲಿ ಶುಭಾರಂಭ ಮಾಡಲಿರುವ ನಿರ್ಮಾಪಕ ಜಗದೀಶ್ ಕಲ್ಯಾಡಿ ಹಾಗೂ ನಿರ್ದೇಶಕ ಮನು ಕಲ್ಯಾಡಿ ಅವರ ಕಾಂಬಿನೇಶನ್‍ನಲ್ಲಿ ಮತ್ತೊಂದು ಅದ್ಧೂರಿ ಚಿತ್ರ ನಿರ್ಮಾಣವಾಗಲಿದೆ. ಈ ಚಿತ್ರದ ನಾಯಕರಾಗಿ ಕನ್ನಡ ಚಿತ್ರರಂಗದ ಖ್ಯಾತ ನಟರೊಬ್ಬರು ನಟಿಸಲಿದ್ದು, ತಾರಾಗಣ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡುವುದಾಗಿ ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.

ಲಾಕ್ ಡೌನ್ ಮುಗಿದ್ದು ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೆ ಈ ನೂತನ ಚಿತ್ರದ ಚಿತ್ರೀಕರಣ ‘ಪ್ರಾರಂಭ’ವಾಗಲಿದೆ. ಕೋವಿಡ್‌ 19 ಲಾಕ್ ಡೌನ್ ನಂತರ ಚಿತ್ರ ನಿರ್ಮಾಣಕ್ಕೆ ಮುಂದಾಗುವವರರು ಕಡಿಮೆ ಎಂಬ ಸುದ್ದಿ ಕೇಳಿ ಬರುತ್ತಿದ್ದು, ಒಂದು ಚಿತ್ರ ಬಿಡುಗಡೆ ಹಂತದಲ್ಲಿರಬೇಕಾದರೆ ಮತ್ತೊಂದು ಅದ್ದೂರಿ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ ಸಹೋದರರಾದ ನಿರ್ಮಾಪಕ ಜಗದೀಶ್ ಕಲ್ಯಾಡಿ ಹಾಗೂ ನಿರ್ದೇಶಕ ಮನು.

Advertisement

Udayavani is now on Telegram. Click here to join our channel and stay updated with the latest news.

Next