Advertisement

ಡಬಲ್‌ ಎಂಜಿನ್‌ ಸರಕಾರ ರಚನೆಗೆ ಮತ್ತೊಮ್ಮೆ ಅವಕಾಶ: ಶೋಭಾ

09:15 PM Mar 29, 2023 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜನತೆ ಡಬಲ್‌ ಎಂಜಿನ್‌ ಸರಕಾರ ರಚನೆಗೆ ಮತ್ತೊಮ್ಮೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ರಾಜ್ಯ ಚುನಾವಣ ನಿರ್ವಹಣ ಸಮಿತಿ ಸಂಚಾಲಕಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಹೆಚ್ಚು ವೇಗವಾಗಿ ಅಭಿವೃದ್ಧಿ ಕಾರ್ಯ ಸಾಧ್ಯ ಎಂಬ ಅಭಿಪ್ರಾಯವನ್ನು ಜನರು ಹೊಂದಿದ್ದಾರೆ. 9.17 ಲಕ್ಷ ಯುವಜನರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. ಅವರು ಎ. 1ರ ವರೆಗೆ ಮತದಾರರ ನೋಂದಣಿ ಮಾಡಬಹುದು. ಇದು ಸ್ವಾಗತಾರ್ಹ ಎಂದು ತಿಳಿಸಿದರು.

ಒಂದೇ ಹಂತದಲ್ಲಿ ಚುನಾವಣೆ ನಡೆಯಲೆಂಬ ಅಪೇಕ್ಷೆ ಇತ್ತು. ಅದೇ ನಿರೀಕ್ಷೆಯಂತೆ ಚುನಾವಣೆ ನಡೆಯುತ್ತಿದೆ. 80 ವರ್ಷಕ್ಕಿಂತ ಮೇಲ್ಪಟ್ಟ 12 ಲಕ್ಷಕ್ಕೂ ಹೆಚ್ಚು ಮತದಾರರು, ಸಾವಿರಾರು ಅಂಗವಿಕಲ ಮತದಾರರು ಮನೆಯÇÉೇ ಕುಳಿತು ಮತದಾನ ಮಾಡಲು ಅವಕಾಶ ಮಾಡಿಕೊಟ್ಟ ಚುನಾವಣ ಆಯೋಗಕ್ಕೆ ಧನ್ಯವಾದಗಳು.
-ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ

Advertisement

Udayavani is now on Telegram. Click here to join our channel and stay updated with the latest news.

Next