Advertisement

ಬೆಂದೂರ್ ವೆಲ್; ಖಾಸಗಿ ಬಸ್ ಧಾವಂತಕ್ಕೆ ಮತ್ತೊಂದು ಬಲಿ, ನಿಲ್ಲಿಸದೆ ಪರಾರಿಯಾದ ಚಾಲಕ

01:26 PM Mar 30, 2023 | Team Udayavani |

ಮಂಗಳೂರು: ಖಾಸಗಿ ಬಸ್ ಢಿಕ್ಕಿ ಹೊಡೆದು ಹನ್ನೊಂದು ವರ್ಷದ ಬಾಲಕ ಅಸುನೀಗಿದ ಪ್ರಕರಣದ ನೆನಪು ಮಾಸುವ ಮುನ್ನ ಬೆಂದೂರ್ ವೆಲ್ ನಲ್ಲಿ ಮತ್ತೊಂದು ಅಪಘಾತ ನಡೆದಿದೆ.

Advertisement

ಖಾಸಗಿ ಬಸ್ ನ ಧಾವಂತಕ್ಕೆ ಒಂದು ವಾರದ ನಡುವೆ ಎರಡನೇ ಘಟನೆ ಇದಾಗಿದೆ. ಪಾದಾಚಾರಿ ಮಹಿಳೆಗೆ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದು, ಬಸ್ ಚಾಲಕ ಬಸ್ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಇದನ್ನೂ ಓದಿ:ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಅಸುನೀಗಿದ್ದಾರೆ. ಪರಾರಿಯಾಗಿರುವ ಬಸ್ ಬಗ್ಗೆ ಪೊಲೀಸರು ಸಿಸಿ ಟಿವಿ ದೃಶ್ಯ ಆಧರಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

Advertisement

ಮಾರ್ಚ್ 24ರಂದು ಖಾಸಗಿ ಬಸ್ ನ ಧಾವಂತಕ್ಕೆ ಬೆಂದೂರ್ ವೆಲ್ ನಲ್ಲಿ ಬಾಲಕ ಮೃತ ಪಟ್ಟಿದ್ದ. ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಕಾರಣ ಹಿಂದೆ ಕುಳಿತಿದ್ದ ಹುಡುಗ ಬಸ್ ಚಕ್ರದಡಿ ಸಿಲುಕಿದ್ದ.

Advertisement

Udayavani is now on Telegram. Click here to join our channel and stay updated with the latest news.

Next