Advertisement

ಶಂಕಿತ ಮಂಗನ ಕಾಯಿಲೆಗೆ ಮತ್ತೋರ್ವ ಬಲಿ

01:25 AM Jan 03, 2019 | Team Udayavani |

ಸಾಗರ: ತಾಲೂಕಿನ ಅರಳಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಮತ್ತೋರ್ವ ವ್ಯಕ್ತಿ ಶಂಕಿತ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ.

Advertisement

ಅಲ್ಲದೆ ಕಾಡುಗಳಲ್ಲಿ ಮಂಗಗಳ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ.ಜ್ವರ, ಜಾಂಡೀಸ್‌ನಿಂದ ಬಳಲುತ್ತಿದ್ದ ಕಂಚಿಕೈ ಮಂಜುನಾಥ್‌ (22) ಮೃತಪಟ್ಟಿದ್ದು ಇವರಿಗೆ ಮಂಗನ ಕಾಯಿಲೆ ತಗುಲಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಇವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಮೃತ ಮಂಜುನಾಥ್‌ಗೆ ಒಂದು ಸುತ್ತಿನ ಲಸಿಕೆ ಹಾಕಲಾಗಿತ್ತು. ಅಲ್ಲದೆ ಕೆಎಫ್‌ಡಿ ವೈರಸ್‌ ಪರಿಶೀಲನೆಗೆ ಅವರ ರಕ್ತವನ್ನು
ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ನಡುವೆ ಮಂಜುನಾಥ್‌ ತಾಯಿಯೂ ಜ್ವರದಿಂದ ಬಳಲುತ್ತಿದ್ದು
ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿದೆ.

ಪ್ರಸ್ತುತ ಮೆಗ್ಗಾನ್‌ನಲ್ಲಿ ಶಂಕಿತ ಕೆಎಫ್‌ಡಿಯ ನಾಲ್ವರಿಗೆ ಹಾಗೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಐದು ಮಂದಿಗೆ
ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕರಾಜ್‌ ಅವರ ಸ್ಥಿತಿ ಗಂಭೀರವಾಗಿದೆ
ಎನ್ನಲಾಗಿದೆ. ಈ ನಡುವೆ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಅರಳಗೋಡು ಗ್ರಾ.ಪಂ.ವ್ಯಾಪ್ತಿಯ ಕಾಡಿನಲ್ಲಿ ಬುಧವಾರ ಎರಡು ಮೃತ ಮಂಗಗಳು ಪತ್ತೆಯಾಗಿದೆ. ಅಲ್ಲದೆ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶಕ್ಕೆ ಅಂಟಿಕೊಂಡಿರುವ ತುಂಬೆ ಗ್ರಾಮದಲ್ಲೂ ಮೃತ ಮಂಗನ ಶವ ಪತ್ತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next