Advertisement

‘ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ’: ಮಂಗಳೂರಿನಲ್ಲಿ ಮತ್ತೆ ವಿವಾದಾತ್ಮಕ ಗೋಡೆ ಬರಹ

09:22 AM Nov 29, 2020 | keerthan |

ಮಂಗಳೂರು: ಕೆಲವೇ ದಿನಗಳ ಹಿಂದೆ ಲಷ್ಕರ್ ಉಗ್ರರನ್ನು ಬೆಂಬಲಿತ ಗೋಡೆ ಬರಹದಿಂದ ಸುದ್ದಿಯಾಗಿದ್ದ ಮಂಗಳೂರಿನಲ್ಲಿ ಇಂದು ಮತ್ತೊಂದು ವಿವಾದಾತ್ಮಕ ಗೋಡೆ ಬರಹ ಬರೆಯಲಾಗಿದೆ. ನಗರದ ಕೋರ್ಟ್ ರಸ್ತೆಯಲ್ಲಿ ಉರ್ದು ಭಾಷೆಯಲ್ಲಿ ಈ ಬರಹ ಬರೆಯಲಾಗಿದೆ.

Advertisement

‘ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ, ತಲೆ ದೇಹದಿಂದ ಬೇರ್ಪಡುವುದು’ ಎಂಬರ್ಥದಲ್ಲಿ ಉರ್ದು ಭಾಷೆಯಲ್ಲಿಆಂಗ್ಲ ಅಕ್ಷರಗಳಲ್ಲಿ ಗೋಡೆಯ ಮೇಲೆ ಬರೆಯಲಾಗಿದೆ.

ಮಂಗಳೂರಿನ ಕೋರ್ಟ್ ರಸ್ತೆಯ ಕೋರ್ಟ್ ಆವರಣದಲ್ಲಿರುವ ಪೊಲೀಸ್ ಔಟ್ ಪೋಸ್ಟ್  ಕಟ್ಟಡದ ಮೇಲೆ ಉರ್ದು ಭಾಷೆಯಲ್ಲಿ ಬರೆಯಲಾಗಿದೆ.

ಇದನ್ನೂ ಓದಿ:ಲಷ್ಕರ್‌ ಬೆಂಬಲಿಸಿ ಬೆದರಿಕೆ ಪ್ರಕರಣ ; 3 ತಂಡಗಳಿಂದ ತನಿಖೆ

Advertisement

ಕಪ್ಪು ಬಣ್ಣದ ಪೈಂಟ್ ಬಳಸಿ ರಾತ್ರಿ ವೇಳೆ ಬರೆಯಲಾಗಿದ್ದು, ರವಿವಾರ ಬೆಳಗ್ಗೆ ವಿಷಯ ಬೆಳಕಿಗೆ ಬಂದಿದೆ. ಬಂದರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಕ್ರಮ ಕೈಗೊಂಡಿದ್ದಾರೆ.

ಕೆಲವೇ ದಿನಗಳ ಹಿಂದೆ ನಗರದ ಅಪಾರ್ಟ್‌ಮೆಂಟ್‌ನ ಆವರಣ ಗೋಡೆ ಮೇಲೆ ಲಷ್ಕರ್‌-ಎ-ತಯ್ಯಬಾ ಮತ್ತು ತಾಲಿಬಾನಿ ಉಗ್ರ ಸಂಘಟನೆಗಳನ್ನು ಬೆಂಬಲಿಸಿದ ಬೆದರಿಕೆ ಬರಹವೊಂದನ್ನು ಬರೆಯಲಾಗಿತ್ತು. ಪ್ರಕರಣದ ಬಗ್ಗೆ ಮೂರು ಪ್ರತ್ಯೇಕ ಪೊಲೀಸ್‌ ತಂಡಗಳು ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿವ ಸಮಯದಲ್ಲೇ ಮತ್ತೊಂದು ಗೋಡೆ ಬರಹ ಕಾಣಿಸಿಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next