Advertisement

ಜನವಿರೋಧಿ ಕೇಂದ್ರ ಸರಕಾರ: ಸುನೀಲ್‌ಕುಮಾರ್‌

02:09 PM Oct 23, 2017 | Team Udayavani |

ಬಜಾಲ್‌: ಕಳೆದ 3 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರಕಾರವು ಹೆಜ್ಜೆ ಹೆಜ್ಜೆಗೂ ಜನ ವಿರೋಧಿಯಾಗಿ ವರ್ತಿಸುತ್ತಿದೆ. ಸರಕಾರದ ತಪ್ಪುಗಳನ್ನು ಎಳೆಎಳೆಯಾಗಿ ಬಿಡಿಸಿ ಜನರ ಮಧ್ಯೆ ಜಾಗೃತಿ ಮೂಡಿಸುವ ಕೆಲಸವನ್ನು ಸಿಪಿಐ(ಎಂ) ದೇಶಾದ್ಯಂತ ಜನಾಂದೋಲನದ ಮೂಲಕ ನಡೆಸುತ್ತಿದೆ ಎಂದು ಸಿಪಿಐ(ಎಂ) ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್‌ಕುಮಾರ್‌ ಬಜಾಲ್‌ ಹೇಳಿದರು.

Advertisement

ಸಿಪಿಐ(ಎಂ) ಬಜಾಲ್‌ ಜಲ್ಲಿಗುಡ್ಡೆ ಶಾಖೆಗಳ ಸಮ್ಮೇಳನದ ಅಂಗವಾಗಿ ಜಲ್ಲಿ ಗುಡ್ಡೆಯಲ್ಲಿ ಜರಗಿದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. 

ಜಿಲ್ಲಾ ಸಮಿತಿ ಸದಸ್ಯೆ ಜಯಂತಿ ಬಿ. ಶೆಟ್ಟಿ ಮಾತನಾಡಿದರು. ಸಮಿತಿ ಸದಸ್ಯ ಪ್ರೇಮನಾಥ ಜಲ್ಲಿಗುಡ್ಡೆ ಅಧ್ಯ ಕ್ಷತೆ ವಹಿಸಿದ್ದರು. ಸುರೇಶ್‌ ಬಜಾಲ್‌, ಮೋಹನ್‌ ಜಲ್ಲಿಗುಡ್ಡೆ, ಮಮತಾ ಜಲ್ಲಿಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next