Advertisement

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ

08:10 AM Jun 13, 2020 | Suhan S |

ಚಳ್ಳಕೆರೆ: ಯಾವುದೇ ಖಾಸಗಿ ಕೈಗಾರಿಕೆ ಹಾಗೂ ಇನ್ನಿತರ ಕಡೆಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿ ಕೊಂಡಿದ್ದು ಕಂಡು ಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವುದು ಎಂದು ಶಿರಸ್ತೇದಾರ್‌ ಚಂದ್ರಶೇಖರ್‌ ಎಚ್ಚರಿಸಿದರು.

Advertisement

ಶುಕ್ರವಾರ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ತಾಲೂಕು ಆಡಳಿತ ಮತ್ತು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ  ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ಕಾರ್ಮಿಕ ಇಲಾಖೆ ಬಾಲಕಾರ್ಮಿಕರ ಸಮಸ್ಯೆಗಳ ನಿವಾರಣೆಗೆ ಹೆಚ್ಚು ಜಾಗ್ರತೆ ವಹಿಸುತ್ತಿದೆ ಎಂದರು.

ಕಾರ್ಮಿಕ ಅಧಿಕಾರಿ ಟಿ. ಕುಸುಮಾ ಮಾತನಾಡಿ, ರಾಜ್ಯದೆಲ್ಲೆಡೆ ಬಾಲಕಾರ್ಮಿಕರ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಬಾಲ ಕಾರ್ಮಿಕರನ್ನು ನೇಮಿಸಿಕೊಂಡು ದುಡಿಸಿಕೊಂಡಲ್ಲಿ ಅದು ಅಪರಾಧ ವಾಗುತ್ತದೆ. ಮಕ್ಕಳ ಸ್ವಾತಂತ್ರ್ಯ ವನ್ನು ಮೊಟಕುಗೊಳಿಸಬಾರದು. ಅನಿಷ್ಠ ಪದ್ಧತಿಯನ್ನು ಹೊಡೆದೋಡಿಸಲು ಎಲ್ಲರೂ ಕಾರ್ಮಿಕ ಇಲಾಖೆ ಯೊಂದಿಗೆ ಕೈಜೋಡಿಸಬೇಕೆಂದರು.

ಆಹಾರ ಶಿರಸ್ತೇದಾರ್‌ ಶಿವಾಜಿ ರಾವ್‌, ಬಿಆರ್‌ಪಿ ಮಲ್ಲಿಕಾರ್ಜುನ್‌, ಸಿಡಿಪಿಒ ಕಚೇರಿಯ ನವೀನ್‌ ಕುಮಾರ್‌, ಶೇಖರಪ್ಪ, ರಾಜಣ್ಣ, ಚಿರಂಜೀವಿ, ಅಮೀರ್‌ ಖಾನ್‌ ರೇಖಾ ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next