Advertisement

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ: ಪ್ರಧಾನ್‌

11:06 AM Apr 22, 2018 | |

ಮಂಗಳೂರು: ರಾಜ್ಯದ ಕಾಂಗ್ರೆಸ್‌ ಸರಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದ್ದು ಆಡಳಿತ ವಿರೋಧಿ ಅಲೆ ಕಾಣಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ  ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು ಅಭಿವೃದ್ಧಿಯ ಸುವರ್ಣ ಯುಗವೊಂದು ಆರಂಭವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹಾಗೂ ಕರಾವಳಿಯಲ್ಲಿ ಪಕ್ಷದ ಚುನಾವಣೆ ಉಸ್ತುವಾರಿ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದರು.

Advertisement

ನಗರದದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರ, ದೂರದೃಷ್ಟಿ ರಹಿತ ಆಡಳಿತದಿಂದ ಕರ್ನಾಟಕ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸಿದ್ದು ಜನರ ಆಶೋತ್ತರಗಳಿಗೆ ಸ್ಪಂದಿಸಲು ವಿಫಲವಾಗಿದೆ. ಕಾಂಗ್ರೆಸ್‌ ಸರಕಾರದ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರ ಚುನಾವಣೆಯ ಮುಖ್ಯ ವಿಷಯವಾಗಲಿದೆ ಎಂದರು.

ಬರಲಿದೆ ಸುವರ್ಣಯುಗ 
ಕೇಂದ್ರದಲ್ಲಿ ಪ್ರಧಾನಿ ಮೋದಿಯವರ ಅಭಿವೃದ್ಧಿ ಪರ ಆಡಳಿತ ಹಾಗೂ ಸಾಧನೆಗಳು, ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ದಕ್ಷ ನಾಯಕತ್ವ ಹಾಗೂ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ನೀಡಿರುವ ಜನಪರ ಆಡಳಿತ ದಿಂದ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು ರಾಜ್ಯ ಸುವರ್ಣಯುಗವೊಂದನ್ನು ಕಾಣಲಿದೆ ಎಂದರು.

ಕರ್ನಾಟಕದಲ್ಲಿ ಬಿಜೆಪಿ ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದು ನಾಮಪತ್ರ ಹಿಂದೆಗೆತಕ್ಕೆ ಕೊನೆಯ ದಿನಾಂಕವಾದ ಎ. 27ರ ಬಳಿಕ ರಾಜ್ಯದಲ್ಲಿ ಪಕ್ಷದ ಚುನಾವಣಾ ಪ್ರಚಾರ ತೀವ್ರಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಸದ್ಯದಲ್ಲೇ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಪ್ರಧಾನ್‌ ಹೇಳಿದರು.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಒಳಗೊಂಡಿರುವ ಆರೋಪದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅಪರಾಧ ಯಾರೇ ಮಾಡಿದರೂ ಶಿಕ್ಷೆಯಾಗಲೇ ಬೇಕು. ಮಕ್ಕಳ ಮೇಲೆ ಅತ್ಯಾಚಾರವೆಸಗುವವರಿಗೆ ಅತ್ಯಂತ ಕಠಿನ ಶಿಕ್ಷೆ ವಿಧಿಸಲು ಅನುವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕಠಿನ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.

Advertisement

ದೇಶದಲ್ಲಿ ಡೀಸೆಲ್‌, ಪೆಟ್ರೋಲ್‌ ಬೆಲೆ ದುಬಾರಿಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಚ್ಚಾತೈಲ ಪೂರೈಕೆ ದೇಶಗಳಾದ ಸಿರಿಯ, ವೆನಿಜೋಲಾ, ಹಾಗೂ ಇರಾಕ್‌ನಲ್ಲಿ ಆಂತರಿಕ ಬಿಕ್ಕಟ್ಟಿನಿಂದಾಗಿ ದೇಶಕ್ಕೆ ಕಚ್ಚಾ ತೈಲ ಸರಬರಾಜಿ
ನಲ್ಲಿ ವ್ಯತ್ಯಯವಾಗಿದ್ದು ಬೆಲೆ ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಡೀಸೆಲ್‌, ಪೆಟ್ರೋಲ್‌ಬೆಲೆಯಲ್ಲಿ ಹೆಚ್ಚಳವಾಗಿದೆ. ಸರಕಾರ ಪರಿಸ್ಥಿತಿ ಅವಲೋಕಿಸಿ ಪೂರಕ ಕ್ರಮ ಕೈಗೊಳ್ಳಲಿದೆ ಎಂದರು. 

ಕರಾವಳಿಯಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ, ಉತ್ತರಪ್ರದೇಶದ ಸಚಿವ ಮಹೇಂದ್ರ ಸಿಂಗ್‌, ಸಂಸದ ನಳಿನ್‌ ಕುಮಾರ್‌ ಕಟೀಲು, ರಾಜ್ಯ ವಿಧಾನಪರಿಷತ್‌ ವಿರೋಧ ಪಕ್ಷ ಮುಖ್ಯ ಸಚೇತಕ ಕ್ಯಾ| ಗಣೇಶ್‌ ಕಾರ್ಣಿಕ್‌, ಮುಖಂಡ ರಾದ ಮೋನಪ್ಪ ಭಂಡಾರಿ, ಸುಲೋಚನಾ ಜಿ.ಕೆ. ಭಟ್‌, ರವಿಶಂಕರ ಮಿಜಾರ್‌, ಕಿಶೋರ್‌ ರೈ, ಕ್ಯಾ| ಬೃಜೇಶ್‌ ಚೌಟ, ಜೀತೇಂದ್ರ ಕೊಟ್ಟಾರಿ, ಸುದರ್ಶನ್‌ ಎಂ., ಸಂಜಯ ಪ್ರಭು, ಕಿಶೋರ್‌ ಕೊಟ್ಟಾರಿ ಉಪಸ್ಥಿತರಿದ್ದರು.

ಅಸಮಾಧಾನ ಬಗೆಹರಿಯಲಿದೆ
ಬಿಜೆಪಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾಕಾಂಕ್ಷಿಗಳಿದ್ದು ಇವರೆಲ್ಲರ ಹೆಸರುಗಳನ್ನು ಪರಿಶೀಲಿಸಿ ಪಕ್ಷದ ವರಿಷ್ಠ ಮಂಡಳಿ
ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಆಕಾಂಕ್ಷಿ ಗಳಲ್ಲಿ ಈ ಬಗ್ಗೆ ಅಸಮಾಧಾನಗಳಿದ್ದರೆ ಅದನ್ನು ಬಗೆಹರಿಸಲಾಗುವುದು. ಬಿಜೆಪಿಯಲ್ಲಿ ಜಾತಿಗೆ ಪ್ರಾಧಾನ್ಯ ಇಲ್ಲ. ಹಿಂದುಳಿದ ವರ್ಗಕ್ಕೆ ಸೇರಿರುವ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಧರ್ಮೇಂದ್ರ ಪ್ರಧಾನ್‌ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next