Advertisement

ಠಾಣೆಗೆ ಹಾಜರಾದ ಹಂಸಲೇಖ: ಪರ-ವಿರೋಧ ಪ್ರತಿಭಟನೆ; ಬಿಗುವಿನ ವಾತಾವರಣ

04:15 PM Nov 25, 2021 | Team Udayavani |

ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಪೇಜಾವರ ಶ್ರೀಗಳ ವಿರುದ್ಧದ ಹೇಳಿಕೆ ಬೆಂಬಲಿಸಿ  ನಟ ಚೇತನ್ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಗುತ್ತಿದೆ.

Advertisement

ಹಂಸಲೇಖ ಅವರಿಗೆ ಮಾಡಿರುವ ಅವಮಾನ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಚೇತನ್ ಮತ್ತು ಇತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಸವನಗುಡಿ ಪೊಲೀಸ್ ಠಾಣೆಯ ಮುಂದೆ ಕನ್ನಡ ಪರ ಸಂಘಟನೆಯ ನೂರಾರು ಕಾರ್ಯಕರ್ತರು ಚೇತನ್ ಅವರ ಪ್ರತಿಭಟನಾ ಸಾರಥ್ಯಕ್ಕೆ ಬೆಂಬಲ ಸೂಚಿಸಿ ಹಂಸಲೇಖ ಅವರ ಪರ ಘೋಷಣೆ ಕೂಗುತ್ತಿದ್ದಾರೆ.

ಇನ್ನೊಂದೆಡೆ ಹಂಸಲೇಖ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಯ ಕಾರ್ಯಕರ್ತರೂ ಠಾಣೆಯ ಮುಂದೆ ಜಮಾಯಿಸಿದ್ದಾರೆ.

ಠಾಣೆಯ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Advertisement

ಕರುನಾಡು ಯುವ ಸೇನೆ ಸೇರಿದಂತೆ ದಲಿತ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.

ರಾಣೆಗೆ ಹಾಜರಾದ ಹಂಸಲೇಖ
ಹೇಳಿಕೆ ವಿರುದ್ಧ ಪ್ರಕರಣ ದಾಖಲಾಗಿದ್ದ ಹಿನ್ನಲೆಯಲ್ಲಿ ಹಂಸಲೇಖ ಅವರು ಬಸವನಗುಡಿ ಠಾಣೆಗೆ ಹಾಜರಾಗಿದ್ದರು. ಸುಮಾರು 1 ಗಂಟೆಗಳ ಕಾಲ ಠಾಣೆಯಲ್ಲಿದ್ದರು.

ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದೇವೆ ಎಂದು ಹಂಸಲೇಖ ಪರ ವಕೀಲ ಸಿ.ಎಸ್.ದ್ವಾರಕಾನಾಥ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next