Advertisement

ಹೊಳೆನರಸೀಪುರದಲ್ಲಿ ಸಿಎಂ ಆಪ್ತ ಮಂಜೇಗೌಡರಿಗೆ ಬಂಡಾಯದ ಬಿಸಿ 

11:50 AM Apr 01, 2018 | |

ಹೊಳೆನರಸೀಪುರ: ಜೆಡಿಎಸ್‌ ಭದ್ರಕೋಟೆಯಲ್ಲಿ ಎಚ್‌.ಡಿ.ರೇವಣ್ಣಗೆ ಶಾಕ್‌ ನೀಡಲು ರಣತಂತ್ರ ಹಣೆದಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡಾಯದ ಬಿಸಿ ತಟ್ಟಿದೆ.

Advertisement

ಆರ್‌ಟಿಓ ಅಧಿಕಾರಿ , ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಗೂರು ಮಂಜೇಗೌಡ ಅವರಿಗೆ ಟಿಕೆಟ್‌ ನೀಡಬಾರದು ಎಂದು 2 ಬಾರಿಯ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಅನುಪಮಾ ಮಹೇಶ್‌ ಬಹಿರಂಗವಾಗಿ ಅಸಮಧಾನ ಹೊರ ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅನುಪಮಾ ‘ಕ್ಷೇತ್ರದ ಹೊರಗಿನವರಿಗೆ ಟಿಕೆಟ್‌ ನೀಡುವುದಕ್ಕೆ ನಮ್ಮ ವಿರೋಧವಿದೆ. ನಾನು 10 ವರ್ಷಗಳಿಂದ ಕಾಂಗ್ರೆಸ್‌ ಪಕ್ಷಕ್ಕಾಗಿ ಕೆಲಸ ಮಾಡಿದ್ದು ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಕಳೆದ ಬಾರಿ 65 ಸಾವಿರ ಜನರು ನನ್ನ ಪರವಾಗಿ ಮತ ಚಲಾಯಿಸಿದ್ದಾರೆ ಅವರಲ್ಲಿ ಯಾರಿಗಾದರೂ ಟಿಕೆಟ್‌ ಕೊಡಲಿ. ಮಂಜೇಗೌಡರಿಗೆ ಟಿಕೆಟ್‌ ನೀಡಿದರೆ ಬೆಂಬಲಿಗರ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ತಿಳಿಸಿದ್ದಾರೆ.

ಸರ್ಕಾರಿ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮಂಜೇಗೌಡರಿಗೆ ಖುದ್ದು ಸಿದ್ದರಾಮಯ್ಯ ಅವರೇ ಸೂಚಿಸಿದ್ದರು. ಇದೀಗ ಬಂಡಾಯ ಹೊಸ ತಲೆನೋವಾಗಿ ಪರಿಣಮಿಸಿದೆ. 

Advertisement

Udayavani is now on Telegram. Click here to join our channel and stay updated with the latest news.

Next