ಇದರಿಂದ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬರುತ್ತಿಲ್ಲ. ಇದು ಕೃಷಿಕರಲ್ಲಿ ಚಿಂತೆ ಹೆಚ್ಚಲು
ಕಾರಣವಾಗಿದೆ.
Advertisement
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಹಿಡಕಲ್ ಹಾಗೂ ಮಲಪ್ರಭಾ ಜಲಾಶಯಗಳಲ್ಲಿ ಹೆಚ್ಚಿನ ಪ್ರಮಾಣದನೀರು ಸಂಗ್ರಹವಿದೆ. ಆದರೆ ಇನ್ನೂ ಆತಂಕ ದೂರವಾಗಿಲ್ಲ. ಕಳೆದ ಒಂದು ವಾರದಿಂದ ಮಳೆ ಮಾಯವಾಗಿರುವುದರಿಂದ ಎರಡೂ ಜಲಾಶಯಗಳ ಒಳಹರಿವಿನ ಪ್ರಮಾಣ ಸಾಕಷ್ಟು ಕಡಿಮೆಯಾಗಿದೆ.
Related Articles
ಎಂಬುದು ನೀರಾವರಿ ನಿಗಮದ ಅಧಿಕಾರಿಗಳ ಹೇಳಿಕೆ.
Advertisement
ಜಲಾಶಯಕ್ಕೆ ಈಗ 739 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಈ ಅವಧಿಗೆ ಯಾವುದೇ ಒಳಹರಿವು ಇರಲಿಲ್ಲ. ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯದಲ್ಲಿ ಈಗ 2454.40 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಸಾಮರ್ಥ್ಯ ಒಟ್ಟು 2476 ಅಡಿಗಳಷ್ಟಿದೆ. ಕಳೆದ ವರ್ಷ ಈ ಅವಧಿಗೆ ಜಲಾಶಯದಲ್ಲಿ 2447.40 ಅಡಿ ನೀರು ಸಂಗ್ರಹವಾಗಿತು.
ಇನ್ನು ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಜೀವನಾಡಿಯಾಗಿರುವ ಮಲಪ್ರಭಾ ಜಲಾಶಯದಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಖಾನಾಪುರ ತಾಲೂಕಿನಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಈಗ 2039.80 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷ ಜೂ.23 ರಂದು ಜಲಾಶಯದಲ್ಲಿ 2033.52 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಅಂದರೆ ಈಗ ಆರು ಅಡಿಗಳಷ್ಟು ಹೆಚ್ಚು ನೀರು ಸಂಗ್ರಹವಿದೆ. ಆದರೆ ಜಲಾಶಯ ಭರ್ತಿಯಾಗುವುದೇ ಇಲ್ಲವೆ ಎನ್ನುವ ಅನುಮಾನ ಕಾಡುತ್ತಿದೆ.