Advertisement

ನಾಳೆಯಿಂದ 3 ದಿನ ಎಪಿಎಂಸಿ ಬಂದ್‌

10:54 AM Mar 18, 2020 | Suhan S |

ಹುಬ್ಬಳ್ಳಿ: ಕೊರೊನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮರಗೋಳದ ಜಗಜ್ಯೋತಿ ಬಸವೇಶ್ವರ ಎಪಿಎಂಸಿ ಮಾರುಕಟ್ಟೆಯನ್ನು ಮಾ. 19ರಿಂದ 21ರ ವರೆಗೆ ಬಂದ್‌ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ.

Advertisement

ಎಪಿಎಂಸಿ ಅಧ್ಯಕ್ಷ ರಾಮಚಂದ್ರ ಜಾಧವ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮೂರು ದಿನಗಳ ಕಾಲ ಮಾರುಕಟ್ಟೆ ಬಂದ್‌ ಮಾಡುವ ಕುರಿತು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಒಂದು ವಾರ ಕಾಲ ಮಾರುಕಟ್ಟೆಯನ್ನು ಬಂದ್‌ ಮಾಡುವ ಕುರಿತು ಚರ್ಚಿಸಲಾಯಿತು. ಆದರೆ ಇದಕ್ಕೆ ಕೆಲ ವ್ಯಾಪಾರಸ್ಥರು ಆಕ್ಷೇಪ ವ್ಯಕ್ತಪಡಿಸಿದರು. ಕೇವಲ ತರಕಾರಿ ಮಾರುಕಟ್ಟೆ ಬಂದ್‌ ಮಾಡಿದರೆ ಸಾಲದು, ಎಲ್ಲ ವ್ಯಾಪಾರವನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.

ನಂತರ ಎಪಿಎಂಸಿಯಲ್ಲಿ ನಡೆಯುವ ಎಲ್ಲ ವಹಿವಾಟನ್ನು ಮೂರು ದಿನ ಸ್ಥಗಿತಗೊಳಿಸಲು ತೀರ್ಮಾನಿಸಲಾಯಿತು. ಸ್ಥಗಿತ ಮುಂದುವರಿಸುವ ಬಗ್ಗೆ ನಂತರ ನಿರ್ಧರಿಸಲಾಗುವುದು ಎಂದು ಅಧ್ಯಕ್ಷರು ಹೇಳಿದರು. ಇದಕ್ಕೂ ಮುನ್ನ ಪಾಲಿಕೆ ಆರೋಗ್ಯ ಇಲಾಖೆ ಸಿಬ್ಬಂದಿ ಕೊರೊನಾ ವೈರಸ್‌ ಹರಡುವ ಬಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವ್ಯಾಪಾರಸ್ಥರ ಸಂಘದ ಸದಸ್ಯರು ಹಾಗೂ ಎಪಿಎಂಸಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next