Advertisement

ಅಪ್ಪಾಜಿ ಬೀಡು ಫೌಂಡೇಶನ್‌ :ದಿನೇಶ್‌ ಕುಲಾಲ್‌ ಕಾರ್ಯಾಧ್ಯಕ್ಷ

03:36 PM Mar 22, 2018 | |

ಮುಂಬಯಿ: ಕಳೆದ 25 ವರ್ಷಗಳಿಂದ ನಗರದ ವರ್ಲಿ ಪರಿಸರದಲ್ಲಿ ಧಾರ್ಮಿಕ ಹಾಗೂ ಸಮಾಜ ಸೇವಾ ನಿರತವಾಗಿರುವ ಅಪ್ಪಾಜಿ ಬೀಡು ಫೌಂಡೇಶನ್‌ ಈಗಾಗಲೇ ಬೆಳ್ಳಿಹಬ್ಬದ ಸಂಭ್ರಮದಲ್ಲಿದ್ದು, ಇದರ ಬಗ್ಗೆ ವಿಶೇಷ ಸಭೆಯು ಮಾ. 18 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಿತು.

Advertisement

ಅಪ್ಪಾಜಿ ಬೀಡು ಫೌಂಡೇಶನ್‌ ರಮೇಶ್‌ ಗುರುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ನಗರದ ಪತ್ರಕರ್ತ, ಸಂಘಟಕ ಬಿ, ದಿನೇಶ್‌ ಕುಲಾಲ್‌ ಇವರನ್ನು ಬೆಳ್ಳಿ ಹಬ್ಬ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ಅವಿರೋಧವಾಗಿ  ನೇಮಿಸಲಾಯಿತು. ಅಪ್ಪಾಜಿ ಬೀಡು ಫೌಂಡೇಶನ್‌ನ 25 ನೇ ವಾರ್ಷಿಕ  ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸ ಲಿದ್ದು ಇದಕ್ಕೆ ಸರ್ವರ ಸಹಕಾರ ಅಗತ್ಯ ಎಂದು ರಮೇಶ್‌ ಗುರುಸ್ವಾಮಿ ಅವರು ಇದೇ ಸಂದರ್ಭದಲ್ಲಿ  ನುಡಿದರು.

ಸಭೆಯಲ್ಲಿ ಅಪ್ಪಾಜಿ ಬೀಡು ಫೌಂಡೇಶನ್‌ನ ಆಡಳಿತ ಟ್ರಸ್ಟಿ ಶಾಂಭವಿ ಶೆಟ್ಟಿ, ಟ್ರಷ್ಟಿಗಳಾದ ರತ್ನಾಕರ ಶೆಟ್ಟಿ, ರಘುನಾಥ ಶೆಟ್ಟಿ, ಅಧ್ಯಕ್ಷರಾದ ಕೇದಗೆ ಸುರೇಶ್‌ ಶೆಟ್ಟಿ, ಉಪಾಧ್ಯಕ್ಷ ಸಂತೋಶ್‌ ಶೆಟ್ಟಿ, ಕಾರ್ಯದರ್ಶಿ ವಸಂತ್‌ ಪೂಜಾರಿ ಹಾಗೂ ಇತರ ಸದಸ್ಯರುಗಳು ಉಪಸ್ಥಿತರಿದ್ದರು.

ಬೆಳ್ಳಿಹಬ್ಬ ಸಂಭ್ರಮಾಚರಣೆಯು ಡಿ. 30 ರಂದು ದಿನೇಶ್‌ ಕುಲಾಲ್‌ ಅವರ ಸಾರಥ್ಯದಲ್ಲಿ ನಗರದಲ್ಲಿ ಹೃದಯಭಾಗದಲ್ಲಿ ಆಯೋಜಿಸುವುದಾಗಿ ಸಭೆಯಲ್ಲಿ ನಿರ್ಧರಿಸಲಾಯಿತು. ಶ್ರೀಕ್ಷೇತ್ರದ ಭಕ್ತಾದಿಗಳು, ಮಹಿಳಾ ವಿಭಾಗದ ಸದಸ್ಯೆಯರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next