Advertisement
ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹದಾಯಿ ತೀರ್ಪಿನಿಂದ ರಾಜ್ಯದ ಜನತೆಗೆ ಅನ್ಯಾಯವಾಗಿದೆ. 15 ಟಿಎಂಸಿ ಶುದ್ಧ ಕುಡಿಯುವ ನೀರು ಸೇರಿದಂತೆ ಒಟ್ಟಾರೆಯಾಗಿ 34 ಟಿಎಂಸಿ ನೀರು ಕೇಳಿದ್ದೆವು. ಆದರೆ, ನಮಗೆ ಕುಡಿಯಲು ಸಿಕ್ಕಿದ್ದು 3.9 ಟಿಎಂಸಿ ಮಾತ್ರ. ಇನ್ನೊಂದು ಭಾಗದಲ್ಲಿ 1.5 ಟಿಎಂಸಿ ನೀಡಿದ್ದಾರೆ. ಈ ಅನ್ಯಾಯ ಸರಿಪಡಿಸಲು ಸುಪ್ರೀಂ ಕೋರ್ಟ್ ಅಥವಾ ನ್ಯಾಯಾಧೀಕಾರಣಕ್ಕೆ ಮೇಲ್ಮನವಿ ಸಲ್ಲಿಸಲೇ ಬೇಕು. ಮೇಲ್ಮನವಿ ಸಲ್ಲಿಸುವ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಅಂತರ್ರಾಜ್ಯ ನದಿ ಜೋಡಣೆ ಕುರಿತು ಚರ್ಚೆ ನಡೆಸಲು ಆ.20ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಎಲ್ಲ ರಾಜ್ಯದ ನೀರಾವರಿ ಸಚಿವ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ಉದ್ಭವಿಸಿರುವ ನೆರೆ, ಮಳೆಹಾನಿ ಹಾಗೂ ಮಳೆ ಇಲ್ಲದ ಪ್ರದೇಶದಲ್ಲಿ ಜನರು ಎದುರಿಸುತ್ತಿರುವ ನೀರಿನ ಕೊರತೆ ಮೊದಲಾದ ವಿಷಯಗಳನ್ನು ಸಭೆಯಲ್ಲಿ ಕೇಂದ್ರ ಸಚಿವರ ಗಮನಕ್ಕೆ ತರಲಾಗುವುದು.
– ಡಿ.ಕೆ.ಶಿವಕುಮಾರ್