Advertisement

ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಮನವಿ

09:25 AM Jul 26, 2020 | Suhan S |

ಕನಕಗಿರಿ: ವಿಜಯಪುರ ಜಿಲ್ಲೆಯ ತಾಳಿಕೋಟೆಯ ಮಿಣಜಗಿ ಗ್ರಾಮದ ದಲಿತ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕನಕಗಿರಿ ತಾಲೂಕು ಸಮಿತಿ ವತಿಯಿಂದ ತಹಶೀಲ್ದಾರ್‌ ಕಾರ್ಯಾಲಯ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

Advertisement

ನೀಲಕಂಠ ಬಡಿಗೇರ ಮಾತನಾಡಿ, ರಾಜ್ಯದಲ್ಲಿ ದಲಿತರ ಮೇಲೆ ನಿರಂತರ ಜಾತಿನಿಂದನೆ, ಹಲ್ಲೆ, ಅತ್ಯಾಚಾರಗಳಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ. ಇಂತಹ ಘಟನೆ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆಯ ಮಿಣಜಗಿ ಗ್ರಾಮದಲ್ಲಿ ದಲಿತ ಯುವಕ ದ್ವಿಚಕ್ರ ವಾಹನ ಮುಟ್ಟಿದ ಎನ್ನುವ ಕಾರಣಕ್ಕೆ ಸವರ್ಣೀಯರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಘಟನೆಗಳಿಗೆ ಪೊಲೀಸ್‌ ಇಲಾಖೆ ಕೇಸಿಗೆ ಪ್ರತಿ ಕೇಸು ದಾಖಲಿಸುತ್ತಿರುವುದು ಖೇದಕರ ಸಂಗತಿ ಎಂದರು.

ಈ ಸಂದರ್ಭದಲ್ಲಿ ಪಾಮಣ್ಣ ಅರಳಿಗನೂರು, ಶೇಷಪ್ಪ ಪೂಜಾರ, ನಾಗರಾಜ ದೊಡ್ಡಮನಿ, ಮುದಿಯಪ್ಪ, ಸಣ್ಣ ಹನುಮಂತ ಹುಲಿಹೈದರ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next