Advertisement

ಬೇಡಿಕೆ ಈಡೇರಿಕೆಗಾಗಿ ಮನವಿ

09:54 AM Oct 02, 2019 | Suhan S |

ಹುಬ್ಬಳ್ಳಿ: ರಾಜ್ಯ ನಿವೃತ್ತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ನಿವೃತ್ತ ನೌಕರರ ಸಂಘದಿಂದ ಜಿಲ್ಲಾಧಿಕಾರಿ ದೀಪಾ ಚೋಳನ್‌ ಅವರಿಗೆ ಮನವಿ ಸಲ್ಲಿಸಲಾಯಿತು. ನಿವೃತ್ತ ನೌಕರರಿಗೆ ಬ್ಯಾಂಕ್‌ಗಳಲ್ಲಿ ಆಗುತ್ತಿರುವ ಸಮಸ್ಯೆಗಳು, ಸರಕಾರದಿಂದ ದೊರೆಯಬೇಕಾದ ವೈದ್ಯಕೀಯ ಭತ್ಯೆ, ನಿವೃತ್ತ ವೇತನದ ವರ್ಗಾವಣೆ ಸೇರಿದಂತೆ ವಿವಿಧ ತೊಂದರೆಗಳನ್ನು ಅನುಭವಿಸುತ್ತಿದ್ದು, ಇವರಿಗೆ ಪರಿಹಾರ ಒದಗಿಸುವ ಕೆಲಸ ಜಿಲ್ಲಾಡಳಿತದಿಂದ ಆಗಬೇಕು ಎಂದು ಮನವಿ ಮಾಡಿದರು. ಇದಕ್ಕೂ ಮೊದಲು ರಾಜ್ಯ ನಿವೃತ್ತ ನೌಕರರ ಪಿಂಚಣಿ ಅದಾಲತ್‌ ನಡೆಯಿತು. ಸಂಘದ ರಾಜ್ಯಾಧ್ಯಕ್ಷ ಬಿ.ಎ. ಪಾಟೀಲ, ಎಂ.ಎಂ. ದಾಮೋದರ, ಡಾ| ಎಂ.ವಿ. ಮುಗದ, ಎ.ಎಫ್‌. ರೇಶ್ಮಿ, ಎಂ.ಎನ್‌. ಗದಗ, ಪ್ರಧಾನ ಕಾರ್ಯದರ್ಶಿ ಪಿ.ಪಿ. ಗಾಯಕವಾಡ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next